• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ

Sambrama Prabha News by Sambrama Prabha News
December 16, 2025
in Politics
0
ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ

Updated By: Priyalachhi

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್, ‘ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ. ನಿಯಮಗಳು ಅನೇಕ ಶಾಲೆಗಳು ಜಾರಿ ಮಾಡಿಲ್ಲ. ಸರ್ಕಾರದ ನಿಯಮ ಖಾಸಗಿ ಶಾಲೆಗಳು ಉಲ್ಲಂಘನೆ ಮಾಡಲಾಗಿದೆ.

ಶಿಕ್ಷಣ ಇಲಾಖೆ ಕೇವಲ ನೊಟೀಸ್ ಕೊಡಲಾಗಿದೆ. ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. RTE ಅಡಿ ಎರಡು ವರ್ಷಗಳಲ್ಲಿ ದಾಖಲಾತಿ ಕಡಿಮೆ ಆಗಿದೆ. ಖಾಸಗಿ ಶಾಲೆಗಳಲ್ಲಿ 25% ಸೀಟು ಕೊಡಬೇಕು. ಈ ಶಾಲೆಗೆ ಸರ್ಕಾರವೇ ಹಣ ಕೊಡಲಿದೆ. ಕಳೆದ 2 ವರ್ಷಗಳಲ್ಲಿ ದಾಖಲಾತಿ ಯಾಕೆ ಕಡಿಮೆ ಆಯ್ತು ಎಂದು ಅವರು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ‘ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.

ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ ಆಗುತ್ತಿದೆಯಾ ಇಲ್ಲವಾ ಎಂದು ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

ಅಂತೆಯೇ RTE ನಿಯಮದ ಅನ್ವಯ ದಾಖಲಾತಿ ಮಾಡುತ್ತಿದ್ದೇವೆ. ಸರ್ಕಾರಿ ಶಾಲೆ ಇಲ್ಲದೆ ಹೋದ್ರೆ ಮಾತ್ರ ಖಾಸಗಿ ಶಾಲೆಗೆ ಸೇರಿಸಬೇಕು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಕೊಡುತ್ತಿದ್ದೇವೆ. ಎಲ್‌ಕೆಜಿ-ಯುಕೆಜಿ ಸರ್ಕಾರಿ ಶಾಲೆಗಳಲ್ಲಿ ಬರ್ತಿದೆ.

Tags: ಮಧು ಬಂಗಾರಪ್ಪ
Previous Post

ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ, ಕೇಂದ್ರಕ್ಕೆ ಪತ್ರ ಬರೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

Next Post

ರಾಜ್ಯದಲ್ಲಿ ‘ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ

Next Post
ರಾಜ್ಯದಲ್ಲಿ ‘ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.