—Advertisement—

,

ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು

Author Picture
Published On: April 5, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ದಾವಣಗೆರೆ: ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಇಲ್ಲಿನ ಅಭಿವೃದ್ಧಿ ಬೆಂಗಳೂರಿನ ಮಟ್ಟಕ್ಕೆ ಸಮಾನವಾಗಿದೆ” ಎಂದು ಹೇಳಿದರು. ಇದೇ ವೇಳೆ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ದೂರದೃಷ್ಟಿಯನ್ನು ಕೊಂಡಾಡಿದರು.

“ಈ ಕ್ಷೇತ್ರದಲ್ಲಿ ಶೇ.98ರಷ್ಟೀು ಮಹಿಳೆಯರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಸುಮಾರು 60,000 ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 61,000 ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಲಾಭ ಹೊಂದಿವೆ. ಅನ್ನಭಾಗ್ಯ ಯೋಜನೆಯಿಂದ 1.45 ಲಕ್ಷ ಜನರಿಗೆ ಸಹಾಯವಾಗಿದೆ ಎಂದು ವಿವರಿಸಿದರು.

ವಿರೋಧ ಪಕ್ಷಗಳು ಆರೋಪ ಮಾಡುತ್ತಿದ್ದರೂ ಮಹಿಳೆಯರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಸ್ಮರಿಸಿದ ಡಿಕೆ.ಶಿವಕುಮಾರ್ ಅವರು, ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗಳು, ಸಮುದಾಯ ಭವನಗಳು, ಶಿಕ್ಷಣ ಸಂಸ್ಥೆಗಳು ನಿರ್ಮಿಸಿ ಜನರಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ವ್ಯಾಪಾರಿಗಳು ಕೂಡ ಅವರ ಆಡಳಿತದಲ್ಲಿ ಯಾವುದೇ ತೊಂದರೆ ಎದುರಿಸಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp