• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 11ಕ್ಕೂ ಹೆಚ್ಚು ಮಂದಿ ಸಜೀವ ದಹನ

Sambrama Prabha News by Sambrama Prabha News
December 25, 2025
in Latest News
0
ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 11ಕ್ಕೂ ಹೆಚ್ಚು ಮಂದಿ ಸಜೀವ ದಹನ

Updated By: Priyalachhi

ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ.

ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

ದುರಂತದಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.

ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Tags: ಚಿತ್ರದುರ್ಗ
Previous Post

ಈ ಇಳಿ ವಯಸ್ಸಿನಲ್ಲೂ ನಾನು ಕೋರ್ಟ್ ಅಲೆಯಬೇಕೇ? ದೇವೇಗೌಡ ಬೇಸರ

Next Post

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಡಿಕೆಶಿ

Next Post
ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಡಿಕೆಶಿ

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಡಿಕೆಶಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.