• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್

Sambrama Prabha News by Sambrama Prabha News
November 18, 2025
in Latest News, Politics
0
ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್

Updated By: Priyalachhi

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿ ಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಸಂಚಾರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನೂ ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು‌ ಎಂದು ಪರಮೇಶ್ವರ್​ ಹೇಳಿದರು.

Tags: ತುಮಕೂರಿಗೆ ಮೆಟ್ರೋ ಯೋಜನೆಸಚಿವ ಜಿ. ಪರಮೇಶ್ವರ್
Previous Post

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನಾಲೆಯಲ್ಲಿ ಸಿಲುಕಿದ್ದ ಕಾಡಾನೆ

Next Post
ನಾಲೆಯಲ್ಲಿ ಸಿಲುಕಿದ್ದ ಕಾಡಾನೆ

ನಾಲೆಯಲ್ಲಿ ಸಿಲುಕಿದ್ದ ಕಾಡಾನೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.