BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್

Author Picture
Published On: May 14, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸಲಹೆ ನೀಡಿದ್ದೇ ತಡ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮತ್ತು ವಾಹನಗಳ ಕನಿಷ್ಠ ಬಳಕೆ ಘೋಷಿಸಿದ್ದಾರೆ.

ದೆಹಲಿ ಸರ್ಕಾರದ ಈ ನಿರ್ಧಾರ ನಾಳೆಯಿಂದಲೇ ಜಾರಿಗೆ ಬರಲಿದ್ದು, ಇಂಧನ ಉಳಿತಾಯ ಮತ್ತು ದಕ್ಷ ಆಡಳಿತವನ್ನು ಉತ್ತೇಜಿಸಲು ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ “ಮೇರಾ ಭಾರತ್ ಮೇರಾ ಯೋಗದಾನ್”(ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಪ್ರಾರಂಭಿಸುತ್ತಿದೆ.

ಪ್ರತಿ ಸೋಮವಾರ “ಮೆಟ್ರೋ ಸೋಮವಾರ” ಎಂದು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ದಿನ ಎಲ್ಲಾ ಸಚಿವರು, ಅಧಿಕಾರಿಗಳು ಮತ್ತು ಉದ್ಯೋಗಿಗಳು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಸರ್ಕಾರ ಸೂಚಿಸಿದೆ.

ವಾರದಲ್ಲಿ ಒಂದು ದಿನ “ವಾಹನ ರಹಿತ ದಿನ”ವನ್ನು ಆಚರಿಸಲು ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.

ದೆಹಲಿಯಲ್ಲಿ ಮುಂದಿನ ಆರು ತಿಂಗಳವರೆಗೆ ಯಾವುದೇ ಹೊಸ ಪೆಟ್ರೋಲ್, ಡೀಸೆಲ್ ಅಥವಾ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಇನ್ನೂ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆಯನ್ನು ಶೇ. 10 ರಷ್ಟು ಹೆಚ್ಚಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಿದೇಶಿ ಪ್ರಯಾಣಕ್ಕೂ ನಿಷೇಧ

ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ಮುಂದಿನ ಒಂದು ವರ್ಷದವರೆಗೆ ಯಾವುದೇ ಅಧಿಕೃತ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಹೆಚ್ಚುವರಿಯಾಗಿ, ಜಾಗೃತಿ ಮೂಡಿಸಲು 90 ದಿನಗಳ ಅಭಿಯಾನ ನಡೆಸಲಾಗುವುದು. ಇಂಧನ ಉಳಿತಾಯವನ್ನು ಉತ್ತೇಜಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ಪ್ರತಿಜ್ಞೆಯನ್ನು ನಾಗರಿಕರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹವಾನಿಯಂತ್ರಣಗಳನ್ನು 24 ರಿಂದ 26 ಡಿಗ್ರಿ ಸೆಲ್ಸಿಯಸ್ ನಡುವೆ ಹೊಂದಿಸಲು ನಿರ್ಧರಿಸಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp