BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಪರಿಸರ ರಕ್ಷಣೆಗೆ 5 ಕೋಟಿ ಸಸಿ ನೆಡುವ ಯೋಜನೆ

Author Picture
Published On: January 5, 2026

—Advertisement—

Updated By: Priyalachhi 

ಬೆಂಗಳೂರು: ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿವರ್ಷ 3-5 ಕೋಟಿ ಸಸಿ ನೆಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ವಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23ನೇ ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp