BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

,

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಸಿನಿಮಾ ನಿರ್ಮಾಪಕಿ

Author Picture
Published On: April 28, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರೆ. ನಿರ್ಮಾಪಕಿಯಾಗಿ ‘ಅಣ್ಣಾ ಫ್ರಂ ಮೆಕ್ಸಿಕೊ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾದ ಟೀಸರ್ ಅನಾವರಣ ಆಗಿದೆ.

‘ಅಣ್ಣಾ ಫ್ರಂ ಮೆಕ್ಸಿಕೊ’ ಸಿನಿಮಾನಲ್ಲಿ ಡಾಲಿ ಧನಂಜಯ್ ನಾಯಕ ಆಗಿದ್ದು, ಈ ಹಿಂದೆ ಡಾಲಿಯ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ಅವರು ಈ ಸಿನಿಮಾವನ್ನೂ ನಿರ್ದೇಶಿಸಲಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಟೀಸರ್ ಬಹಳ ಚೆನ್ನಾಗಿತ್ತು, ಬಹಳ ರಿಚ್ ಆಗಿತ್ತು. ಅದರಲ್ಲೂ ಧನಂಜಯ್ ಅವರ ಕೊರಳಿನಲ್ಲಿದ್ದ ಕರ್ನಾಟಕದ ಲಾಕೆಟ್ ನೋಡಿ ಬಹಳ ಖುಷಿ ಆಯ್ತು. ಟೀಸರ್ ನೋಡಿದರೆ ಸಿನಿಮಾ ಎಷ್ಟು ರಿಚ್ ಆಗಿರಬಹುದು ಎಂಬ ಅಂದಾಜು ಸಿಗುತ್ತಿದೆ. ಡಾಲಿ ಪ್ರತಿಬಾರಿಯಂತೂ ಅದ್ಭುತವಾಗಿ ನಟಿಸಿದ್ದಾರೆ’ ಎಂದರು.

‘ಚಿತ್ರರಂಗ ಹೊಸದು ನನಗೆ, ಚಿಕ್ಕಂದಿನಿಂದಲೂ ಚಿತ್ರರಂಗದ ಬಗ್ಗೆ ಆಸೆ, ಕುತೂಹಲ ಇದ್ದೇ ಇದೆ. ಬಹಳ ದೊಡ್ಡ ದೊಡ್ಡ ನಟರನ್ನು ನೋಡಿಕೊಂಡು ಬೆಳೆದು ಬಂದವಳು. ರಾಜ್​ಕುಮಾರ್, ವಿಷ್ಣುವರ್ಧನ್, ಅನಂತ್​​ನಾಗ್, ಶಂಕರ್​ನಾಗ್, ಜಯಮಾಲ, ಜಯಪ್ರಧಾ ಇನ್ನೂ ಹಲವರನ್ನು ನೋಡಿ ಬೆಳೆದವಳು. ನಾನೂ ಸಹ ಎಲ್ಲರಂತೆ ಮಧ್ಯಮ ವರ್ಗದಿಂದ ಬಂದವಳು, ಕನ್ನಡ ಚಿತ್ರರಂಗಕ್ಕೆ ಏನಾದರೂ ಮಾಡಬೇಕು, ಅಲ್ಲಿಯೂ ಕೆಲಸ ಮಾಡಬೇಕು ಎಂಬ ಆಸೆ ಮೊದಲಿನಿಂದಲೂ ನನಗೆ ಇತ್ತು. ಈಗ ಡಾಲಿ ಧನಂಜಯ್ ಅವರು ಒಳ್ಳೆಯ ಕತೆ ಹಿಡಿದುಕೊಂಡು ಬಂದರು. ನೀವು ನಿರ್ಮಾಣ ಮಾಡಲೇ ಬೇಕು ಎಂದಾಗ ಇಲ್ಲ ಎನ್ನಲಾಗಲಿಲ್ಲ’ ಎಂದರು.

‘ಕನ್ನಡ ಚಿತ್ರರಂಗದ ಬಹಳ ಎತ್ತರಕ್ಕೆ ಬೆಳೆಯುತ್ತಿದೆ. ವಿಶ್ವಮಟ್ಟದಲ್ಲಿ ಕನ್ನಡ ಪ್ರೇಕ್ಷಕರು ಇದ್ದಾರೆ. ಹಾಗಾಗಿ ಇದು ಒಳ್ಳೆಯ ಸಂದರ್ಭ ಎಂಬ ಕಾರಣಕ್ಕೆ ನಾವು ಇನ್ನು ಕೆಲವರೊಟ್ಟಿಗೆ ಸೇರಿಕೊಂಡು ಸಿನಿಮಾ ಮಾಡುತ್ತಿದ್ದೇವೆ. ನನ್ನ ಸಹೋದರ ಚನ್ನರಾಜ್ ಹಟ್ಟಿಹೊಳಿ ಎಲ್ಲವನ್ನೂ ನಿಭಾಯಿಸಲಿದ್ದಾರೆ. ನಮ್ಮ ನಿರ್ಮಾಣ ಸಂಸ್ಥೆಯಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರೊಟ್ಟಿಗೆ ಇನ್ನೊಂದು ಸಿನಿಮಾ ಮಾಡಲಿದ್ದೇವೆ’ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp