• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸುರ್ಜೇವಾಲ ಸಮ್ಮುಖದಲ್ಲೇ ಡಿಕೆ ಡಿಕೆ ಘೋಷಣೆ ಕೂಗಿದ ಅಭಿಮಾನಿಗಳು, ಸಿಟ್ಟಾದ ಸಿದ್ದರಾಮಯ್ಯ

Sambrama Prabha News by Sambrama Prabha News
January 27, 2026
in Politics
0
ಸುರ್ಜೇವಾಲ ಸಮ್ಮುಖದಲ್ಲೇ ಡಿಕೆ ಡಿಕೆ ಘೋಷಣೆ ಕೂಗಿದ ಅಭಿಮಾನಿಗಳು, ಸಿಟ್ಟಾದ ಸಿದ್ದರಾಮಯ್ಯ

Updated By: Priyalachhi

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (ಮನರೇಗಾ) ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಪ್ರತಿಭಟನಾ ವೇದಿಕೆ ಮೇಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕುಳಿತಿದ್ದರು. ಈ ವೇಳೆ ಮಾತನಾಡಲು ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಡಿಕೆ ಶಿವಕುಮಾರ್ ಅಭಿಮಾನಿಗಳು ಡಿಕೆ ಡಿಕೆ ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಸಿಟ್ಟಾದ ಸಿದ್ದರಾಮಯ್ಯ ಸುಮ್ಮನೆ ಕುಳಿತುಕೊಳ್ಳುವಂತೆ ಸೂಚಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: ಸಿದ್ದರಾಮಯ್ಯ
Previous Post

ನಾವು ಜನರ ಸೇವೆ ಮಾಡಲು ಸಿಎಂ ಆಗುವುದು: ಡಿ.ಕೆ ಶಿವಕುಮಾರ್

Next Post

ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

Next Post
ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.