• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

Sambrama Prabha News by Sambrama Prabha News
January 31, 2026
in Latest News
0
ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದೆ.

ಅಕ್ರಮ ಮರಳು ದಂಧೆಯಲ್ಲಿ ರಾಜಕೀಯ ಪಕ್ಷಗಳ ಪ್ರಭಾವಿಗಳು ಭಾಗಿಯಾಗಿರುವ ಶಂಕೆಯೂ ಇದೆ ಎಂಬ ಮಾತುಗಳೂ ಕೇಳಿಬಂದಿವೆ. ಅಕ್ರಮ ಮರಳು ಸಾಗಣೆಯಿಂದ ಕೃಷಿ ಜಮೀನುಗಳು ಹಾಳಾಗುತ್ತಿವೆ, ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಹಾಗೂ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಇದೇ ವೇಳೆ ಅಕ್ರಮ ತಡೆಯಲು ರಚಿಸಲಾದ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಕೇವಲ ಹೆಸರಿಗಷ್ಟೇ ಇದ್ದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಟೀಕಿಸಿದೆ.

Tags: ಹೈಕೋರ್ಟ್
Previous Post

ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್ ಅಮಾನತು: ಗೃಹ ಸಚಿವ ಪರಮೇಶ್ವರ್

Next Post

ನಟ Yash ತಾಯಿ ಪುಷ್ಪ ಫುಲ್ ಗರಂ, ಬೋರ್ಡ್ ಕಿತ್ತು ರಂಪಾಟ

Next Post
ನಟ Yash ತಾಯಿ ಪುಷ್ಪ ಫುಲ್ ಗರಂ, ಬೋರ್ಡ್ ಕಿತ್ತು ರಂಪಾಟ

ನಟ Yash ತಾಯಿ ಪುಷ್ಪ ಫುಲ್ ಗರಂ, ಬೋರ್ಡ್ ಕಿತ್ತು ರಂಪಾಟ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.