• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ

Sambrama Prabha News by Sambrama Prabha News
January 28, 2026
in Politics
0
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ

Updated By: Priyalachhi

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರ ನೀಡಿದರು.

ಬಿಜೆಪಿ ಶಾಸಕ ಮುನಿರಾಜು ಅವರು ಅರ್ಕಾವತಿ ಬಡಾವಣೆ ನಿರ್ಮಾಣವಾಗಿ 20 ವರ್ಷವಾಗಿದ್ದರೂ ನಿವೇಶನ ಸ್ವಾಧೀನ, ರೈತರಿಗೆ ಪರಿಹಾರ ನೀಡದಿರುವ ಬಗ್ಗೆ ಕೇಳಿದಾಗ, “ಅರ್ಕಾವತಿ ಬಡಾವಣೆ ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ಆರಂಭವಾಯಿತು. ಈ ಮಧ್ಯೆ ನಿವೇಶನಕ್ಕೆ ಅನೇಕರು ಅರ್ಜಿ ಹಾಕಿಕೊಂಡು, ಅವರಿಗೆ ನಿವೇಶನ ಮಂಜೂರಾಯಿತು. ಭೂಸಂತ್ರಸ್ತರಿಗೆ ಅದೇ ಜಾಗದಲ್ಲಿ ಪರಿಹಾರವಾಗಿ ಜಾಗ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ಮುಂದೆ ಯಾವ ರೀತಿ ಮಾಡಬೇಕು ಎಂದು ನಿರ್ಧರಿಸಲು ಕೇಶವ ನಾರಾಯಣ ಸಮಿತಿ ನೇಮಿಸಿದೆ.

ಈ ಸಮಿತಿ ಪರಿಶೀಲನೆ ಮಾಡುತ್ತಿದೆ. ಭೂಸಂತ್ರಸ್ತ ರೈತರಿಗೆ ಪರಿಹಾರವಾಗಿ ಭೂಮಿ ನೀಡಬೇಕು ಎಂಬುದಕ್ಕೆ ನಾನು ಬದ್ಧವಾಗಿದ್ದೇನೆ. ಈ ವಿಚಾರವಾಗಿ ಸಧ್ಯದಲ್ಲೇ ಸಭೆ ಕರೆಯಲಿದ್ದು, ಸಮಿತಿಯವರನ್ನು ಕರೆದು ಆದಷ್ಟು ಬೇಗ ತೀರ್ಮಾನ ಮಾಡುವಂತೆ ಮನವಿ ಮಾಡಲಾಗುವುದು. ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಸ್ಪಷ್ಟ ಉತ್ತರ ನೀಡಲಾಗುವುದು” ಎಂದು ಭರವಸೆ ನೀಡಿದರು.

Tags: ಡಿಸಿಎಂ ಡಿ.ಕೆ. ಶಿವಕುಮಾರ್
Previous Post

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು

Next Post

ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

Next Post
ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.