Updated By: Priyalachhi

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.

ತಾತ್ಕಾಲಿಕ ಜಪ್ತಿಗೊಂಡ ಆಸ್ತಿಗಳಲ್ಲಿ ಕಾನೂನುಬಾಹಿರವಾಗಿ ಹಂಚಿಕೆಗೊಂಡ 6 ಮುಡಾ ನಿವೇಶನಗಳು, 3 ಇತರೆ ಮಾದರಿ ಆಸ್ತಿಗಳು ಹಾಗೂ ಒಂದು ವಾಣಿಜ್ಯ ಕಟ್ಟಡ ಸೇರಿವೆ. ಜನವರಿ 21ರಂದು ಇ.ಡಿ ದಾಳಿ ನಡೆಸಿದೆ.

ಮೈಸೂರಿನಲ್ಲಿ ದಾಖಲಾಗಿದ್ದ ಮುಡಾ ಪ್ರಕರಣದ ಎಫ್‌ಐಆರ್ ತನಿಖೆಯನ್ನು ಜಾರಿ ನಿರ್ದೇಶನಾಲಯ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಭೂಸ್ವಾಧೀನಕ್ಕೆ ಪರಿಹಾರವಾಗಿ ನಿವೇಶನ ಹಂಚಿಕೆ) ನಿಯಮಗಳು2009 (2015ರ ತಿದ್ದುಪಡಿ ಸಹಿತ) ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಸ್ವಯಂ ಭೂಸರಣಿ ಪ್ರೋತ್ಸಾಹ ಯೋಜನೆ) ನಿಯಮಗಳು 1991ರ ಘೋರ ಉಲ್ಲಂಘನೆಯೊಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಇ.ಡಿ ಹೇಳಿದೆ.

ಇದೇ ವೇಳೆ, ಮುಡಾ ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ನಡುವಿನ ಸಂಬಂಧ ಹಾಗೂ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆ ಹಾಗೂ ಲೇಔಟ್ ಅನುಮೋದನೆಗಾಗಿ ನಗದು ಪಾವತಿ ನಡೆದಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಇ.ಡಿ ತಿಳಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version