BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಏಕನಾಥ್ ಶಿಂಧೆ ದೂರವಿಡಲು ಬದ್ಧವೈರಿ ಕಾಂಗ್ರೆಸ್ ಜತೆ ಬಿಜೆಪಿ ಮೈತ್ರಿ

Author Picture
Published On: January 7, 2026

—Advertisement—

Updated By: Priyalachhi 

ಮುಂಬೈ: ರಾಜಕೀಯದಲ್ಲಿ ಯಾರು ಶಾಶ್ವತವಾಗಿ ಶತ್ರುಗಳಲ್ಲ ಯಾರು ಶಾಶ್ವತವಾಗಿ ಮಿತ್ರರಲ್ಲ ಎಂಬ ಮಾತು ಅಕ್ಷರಶಃ ನಿಜವಾಗಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ನಾಥ್ ಪುರಸಭೆಯಲ್ಲಿ ಬದ್ಧವೈರಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿವೆ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಬುಧವಾರ ತನ್ನ 12 ಹೊಸ ಕೌನ್ಸಿಲರ್‌ಗಳನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಈ ಮೈತ್ರಿ “ಸಂಪೂರ್ಣವಾಗಿ ತಪ್ಪು ಕ್ರಮ” ಎಂದು ಕರೆದ ಮಹಾರಾಷ್ಟ್ರ ಕಾಂಗ್ರೆಸ್, ಅಂಬರ್ನಾಥ್ ಬ್ಲಾಕ್ ಸಮಿತಿಯನ್ನು ವಿಸರ್ಜಿಸಿ ಅದರ ಅಧ್ಯಕ್ಷ ಮತ್ತು ಪಕ್ಷದ ಹಿರಿಯ ನಾಯಕ ಪ್ರದೀಪ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು, ಈ ಸಂಬಂಧ ಪ್ರದೀಪ್ ಅವರಿಗೆ ಪತ್ರ ಬರೆದಿದ್ದು, “ಇದು ಸಂಪೂರ್ಣವಾಗಿ ತಪ್ಪು ಕ್ರಮ ಮತ್ತು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ. ಈ ವಿಷಯವನ್ನು ಪರಿಗಣಿಸಿ, ಗೌರವಾನ್ವಿತ ರಾಜ್ಯ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರ ಆದೇಶದ ಮೇರೆಗೆ, ನಿಮ್ಮನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಇದಲ್ಲದೆ, ನಿಮ್ಮ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಗುತ್ತಿದೆ. ಅದೇ ರೀತಿ, ನಿಮ್ಮೊಂದಿಗೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಎಲ್ಲಾ ಕಾರ್ಪೊರೇಟರ್‌ಗಳನ್ನು ಸಹ ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp