• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ

Sambrama Prabha News by Sambrama Prabha News
April 11, 2026
in Latest News, Nation News, Politics
0
ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಜೆಡಿಎಸ್ ಗೆ ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣವನ್ನು ಬಿಡಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷ ಹೆಚ್ಚು ಜನ ಭಾಗಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು.

ಬೆಳ್ಳಿ ಹಬ್ಬದ ಸಮಾವೇಶ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ಹಿಡಿದಿರೋ ಗ್ರಹಣ ಮುಕ್ತಿಗಾಗಿ ಜೆಡಿಎಸ್ ಗೆ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಬೆಂಗಳೂರಿಗೆ ಮೆಟ್ರೋ ಯೋಜನೆ ಸೇರಿ ಅನೇಕ ಯೋಜನೆ ಕೊಟ್ಟವನು ನಾನು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚದರ ಅಡಿಗೆ 100 ರೂ. ಫಿಕ್ಸ್ ಮಾಡಿದೆ ಎಂದು ಮಾಜಿ ಸಿಎಂ ಆರೋಪಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರೂ ಜನರ ಆಶೀರ್ವಾದದಿಂದ ಸಿಎಂ ಆಗಿಲ್ಲ ಎಂದ ಕುಮಾರಸ್ವಾಮಿ ಒಂದು ಬಾರಿ ಜೆಡಿಎಸ್ ಅಧಿಕಾರ ಕೊಡಿ ಎಂದು ಮನವಿ ಮಾಡಿದರು.

Tags: ಕೇಂದ್ರ ಸಚಿವ ಕುಮಾರಸ್ವಾಮಿ
Previous Post

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ; ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

Next Post

ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ

Next Post
ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ

ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.