Updated By: Priyalachhi
ಬೆಂಗಳೂರು: ಈ ಹಿಂದೆ 2016 ಮುಖ್ಯಮಂತ್ರಿಯಾಗಿದ್ದಾಗ ಹ್ಯೂಬ್ಲೋಟ್ ವಾಚಿನಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮತ್ತೊಮ್ಮೆ ಕಾರ್ಟಿಯರ್ ವಾಚಿನಿಂದ ವಿವಾದಕ್ಕೆ ಸಿಲುಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವೆ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಹಗ್ಗಜಗ್ಗಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಎರಡನೇ ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುವ ಮೂಲಕ ಮತ್ತೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಆದರೆ ಈ ಉಭಯ ನಾಯಕರು ಕಟ್ಟಿರುವ ಒಂದೇ ಕಂಪನಿಯ ಒಂದೇ ತರಹದ ವಾಚ್ ತೀವ್ರ ಚರ್ಚೆಗೆ ಕಾರಣವಾಗಿದೆ. ಒಗ್ಗಟ್ಟು ಪ್ರದರ್ಶಿಸಲು ಇಬ್ಬರು ನಾಯಕರು ಒಂದೇ ತರಹದ ವಾಚ್ ಕಟ್ಟಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಕಾರಣ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಇಬ್ಬರು ನಾಯಕರು ಕಾರ್ಟಿಯರ್(cartier) ಬ್ರ್ಯಾಂಡ್ ವಾಚ್ ಕಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
