Updated By: Priyalachhi

ಬೆಂಗಳೂರು: ಕರಾವಳಿ ಕರ್ನಾಟಕದ ಮೂಲಕ ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾರ್ವಜನಿಕ ಬೇಡಿಕೆ ಇದಾಗಿದೆ ಮತ್ತು ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಪ್ರಸ್ತಾವಿತ ಈ ಹೈ-ಸ್ಪೀಡ್ ರೈಲು ಸೇವೆಯು ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾದ ಕರಾವಳಿ ನಡುವಿನ ರೈಲು ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version