BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

‘ಕಾಣುವ ಕುರ್ಚಿಗೆ ಹಂಬಲಿಸಿದೇ ಮನ, ಕೂಡಬಲ್ಲೆನೇ ಒಂದು ದಿನ’: ಡಿಕೆಶಿ ಕಾಲೆಳೆದ ಸುನೀಲ್ ಕುಮಾರ್

Author Picture
Published On: December 11, 2025

—Advertisement—

Updated By: Priyalachhi

ಬೆಳಗಾವಿ: ‘ಕಾಣುವ ಕುರ್ಚಿಗೆ ಹಂಬಲಿಸಿದೇ ಮನ, ಕೂಡಬಲ್ಲೆನೇ’ ಒಂದು ದಿನ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ದೇಶಿಸಿ ವಿಡಂಬನಾತ್ಮಕವಾಗಿ ಕಾಳೆದರು.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಈ ಸ್ವಾರಸ್ಯಕರ ಪ್ರಸಂಗ ನಡೆಯಿತು. ಬಿಜೆಪಿ ಸದಸ್ಯ ಅರವಿಂದ್ ಬೆಲ್ಲದ್ ಮಾತನಾಡಿ, ‘ಮೇಕೆದಾಟು ಪಿತಾಮಹ ಡಿ.ಕೆ.ಶಿವಕುಮಾರ್, ಮೇಕೆದಾಟುವಿನ ಯೋಜನೆ ಈಗಾಗಲೇ ಶುರು ಮಾಡಬಹುದು. ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್​​ ತಿರಸ್ಕಾರ ಮಾಡಿದೆ’ ಎಂದರು.

ಬೆಲ್ಲದ್ ಮಾತಿಗೆ ಮಧ್ಯ ಪ್ರವೇಶ ಮಾಡಿದ ಡಿಸಿಎಂ ಡಿಕೆಶಿ, ‘ಕೋರ್ಟ್ ನಮ್ಮದೇನು ಇಲ್ಲ ಸರ್ಕಾರ ತೀರ್ಮಾನ ಮಾಡಬೇಕು ಎಂದಿದೆ. ನಾನು ಹೊಸದಾಗಿ ಡಿಡಬ್ಲ್ಯೂಸಿಗೆ ಅರ್ಜಿ ಹಾಕುತ್ತೇನೆ. ಪರಿಷ್ಕೃತ ಡಿಪಿಆರ್ ಕೂಡ ರೆಡಿ ಮಾಡಿ ಕೊಡುತ್ತೇವೆ. ನಿಮ್ಮ ಎಲ್ಲರಿಗೂ ನಾನು ಕೈ ಮುಗಿದು ಕೇಳುತ್ತೇನೆ. ಆದಷ್ಟು ಬೇಗ ನಿಮ್ಮ ಎಲ್ಲರನ್ನು ಕರೆದುಕೊಂಡು ಹೋಗುವ ಸಂಕಲ್ಪವನ್ನು ತಾಯಿ ಕಾವೇರಿ ಕೊಟ್ಟಿದ್ದಾಳೆ. ನೀವೆಲ್ಲರೂ ಸಹಕಾರ ಕೊಡಬೇಕು, ಆದಷ್ಟು ಬೇಗ ಭೂಮಿ ಪೂಜೆ ಮಾಡೋಣ’ ಎಂದು ಕೈ ಮುಗಿದು ಮನವಿ ಮಾಡಿದರು.

ಈ ವೇಳೆ, ಎದ್ದುನಿಂತ ಬಿಜೆಪಿ ಸದಸ್ಯ ಸುನೀಲ್ ಕುಮಾರ್, ‘ಇಷ್ಟು ನಯ, ವಿನಯ ಎಲ್ಲಿಂದ ಬಂತು ಸರ್ ನಿಮಗೆ. ಇದೇ ಡಿ.ಕೆ.ಶಿವಕುಮಾರಾ? ಹೊಸ ಶಿವಕುಮಾರಾ?. ಡಿ.ಕೆ.ಶಿವಕುಮಾರ್ ಎಂಬುದಕ್ಕೆ ಒಂದು ಕಲ್ಪನೆ ಇದೆ. ದಿಢೀರ್ ಆಗಿ ಇಷ್ಟು ನಯ, ವಿನಯ ಹೇಗೆ ಬಂತು? ಸಿ.ಅಶ್ವಥ್ ಅವರದ್ದು ಒಂದು ಹಾಡಿದೆ. ಕಾಣದ ಕಡಲಿಗೆ ಹಂಬಲಿಸುತ್ತಿದೇ ಮನ. ಕಾಣಬಲ್ಲೆನೆ ಒಂದು ದಿನ ಅಂತ. ಅದರಂತೆ, ಡಿ.ಕೆ.ಶಿವಕುಮಾರ್ ಅವರು, ಈಗ ಕಾಣುವ ಕುರ್ಚಿಗೆ ಹಂಬಲಿಸಿದೇ ಮನ, ಕೂಡಬಲ್ಲೆನೇ ಒಂದು ದಿನ ಎಂದು ಹೇಳುತ್ತಿದ್ದಾರೆ’ ಎಂದು ಟಾಂಗ್ ನೀಡಿದರು.‌

‘ಹೀಗಾಗಿ ನಯ, ವಿನಯ ಶುರುವಾಯ್ತೊ? ನಿಜವಾಗಿ ವಿಪಕ್ಷದ ಬಗ್ಗೆ ನಯ, ವಿನಯ ಶುರುವಾಯ್ತೋ? ನಿಮ್ಮ ನಾಯಕತ್ವವನ್ನು ನಾವು ಒಪ್ಪುತ್ತೇವೆ. ಆದರೆ ನೀವು ಈ ರೀತಿ ನಯ, ವಿನಯ ತೋರಿಸಿದರೆ ಹೇಗೆ?’ ಎಂದು ಡಿಕೆಶಿ ಸಿಎಂ ಕುರ್ಚಿ ಕನಸು ಪ್ರಸ್ತಾಪಿಸಿ ಡಿಕೆಶಿ ಅವರ ಕಾಲೆಳೆದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp