BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ಸರ್ಕಾರದ ಮೇಲೆ ಮುಗಿಬಿದ್ದ ಪ್ರತಿಪಕ್ಷ ಬಿಜೆಪಿ: ಶ್ವೇತಪತ್ರ ಬಿಡುಗಡೆಗೆ ಒತ್ತಾಯ

Author Picture
Published On: December 18, 2025

—Advertisement—

Updated By: Priyalachhi

ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ. ಕಾಂಗ್ರೆಸ್‌ನ ಎರಡು ವರ್ಷಗಳ ಆಡಳಿತದಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಒತ್ತಾಯಿಸಿದರು.

ಕಾನೂನು ಸುವ್ಯವಸ್ಥೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರರಿಗೆ, ಭಯೋತ್ಪಾದಕರಿಗೆ ರೆಸಾರ್ಟ್, ಫೈವ್‌ ಸ್ಟಾರ್‌ ಸೌಲಭ್ಯ ನೀಡಲಾಗುತ್ತಿದೆ. ಕೈದಿಗಳು ಬ್ಯಾರಕ್‌ಗೆ ವರ್ಗಾವಣೆ ಮಾಡಿಸಿಕೊಳ್ಳಲು ಜೈಲಧಿಕಾರಿಗಳಿಗೆ ಲಂಚ ನೀಡುತ್ತಾರೆ. ಅದಕ್ಕಾಗಿ ಲಾಬಿಯೂ ನಡೆಯುತ್ತದೆ. ರೌಡಿಶೀಟರ್‌ ಗುಬ್ಬಚ್ಚಿ ಸೀನ ಜೈಲಿನಲ್ಲೇ ಜನ್ಮದಿನ ಆಚರಿಸಿಕೊಂಡ. ಆ ಕೇಕ್‌ ಮೇಲೆ ಹೆಸರು ಬರೆಸಿಕೊಂಡಿದ್ದ. ಅಂತಹ ಕೇಕ್‌ ಜೈಲಿನೊಳಗೆ ಹೇಗೆ ಬಂತು ಎಂದು ತಿಳಿದಿಲ್ಲ. ಭಯೋತ್ಪಾದಕ ಶಕೀಲ್‌ ಮನ್ನಾ ಕೈಯಲ್ಲಿ ಫೋನ್‌ ಇರುವ ವಿಡಿಯೋ ಹೊರಗೆ ಬಂದಿದೆ. ಇದಕ್ಕೂ ಮುನ್ನ ನಟ ದರ್ಶನ್‌ ಕೈಯಲ್ಲಿ ಸಿಗರೇಟ್‌ ಇರುವ ಫೋಟೋ ಬಂದಿತ್ತು. ಪೊಲೀಸ್‌ ಆಯುಕ್ತರು ಪ್ರತಿ ತಿಂಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಜೈಲಿನ ನಿಯಮದಲ್ಲೇ ಇದೆ. ಆದರೆ ಈ ರೀತಿ ಭೇಟಿಗಳು ನಡೆದಿಲ್ಲ ಎಂದು ಆರೋಪಿಸಿದರು.

ಪೊಲೀಸರೇ ಕಳ್ಳರಾಗಿದ್ದಾರೆ: ಈಗ ರಾಜ್ಯದಲ್ಲಿ ಪೊಲೀಸರೇ ಕಳ್ಳರಾಗಿದ್ದಾರೆ. ಬೆಂಗಳೂರಿನಲ್ಲಿ 11 ತಿಂಗಳಲ್ಲಿ 130 ಪೊಲೀಸರು ಅಪರಾಧಿಗಳ ಜೊತೆ ಶಾಮೀಲಾಗಿ ಅಮಾನತಾಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಬ್ಯಾಂಕ್‌ನ 7 ಕೋಟಿ ರೂ. ದರೋಡೆಯಾಗಿದ್ದು, ಅದರ ನೇತೃತ್ವವನ್ನು ಪೊಲೀಸ್‌ ಕಾನ್ಸ್‌ಟೇಬಲ್‌ ವಹಿಸಿಕೊಂಡಿದ್ದ. ಬೀದರ್‌ನಲ್ಲಿ ಬ್ಯಾಂಕ್‌ ಹಣ ಲೂಟಿಯಾದ ಪ್ರಕರಣದಲ್ಲಿ ಆರೋಪಿಗಳು ಪತ್ತೆಯಾಗಿಲ್ಲ. ಹಿಂದೆ ಅಪರಾಧಿಗಳಿಗೆ ಪೊಲೀಸರ ಭಯ ಇತ್ತು. ಈಗ ಭಯವೇ ಇಲ್ಲ. 23,000 ಸಕ್ರಿಯ ರೌಡಿಗಳು ರಾಜ್ಯದಲ್ಲಿದ್ದಾರೆ. 43,000 ಬೈಕ್‌ಗಳು ಕಳ್ಳತನವಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಸೈಬರ್‌ ಅಪರಾಧಗಳಲ್ಲಿ 5,474 ಕೋಟಿ ರೂ. ಕಳ್ಳತನವಾಗಿದೆ. ಪೊಲೀಸರು 627 ಕೋಟಿ ರೂ. ವಾಪಸ್‌ ಪಡೆದಿದ್ದಾರೆ. ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳು ಹೆಚ್ಚಿದ್ದು, ಗೃಹ ಇಲಾಖೆ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿಲ್ಲ. ಡ್ರಗ್ಸ್‌ ಮಾಫಿಯಾ ಎಲ್ಲೆಡೆ ಅಧಿಕವಾಗಿದೆ. ಈ ಅಕ್ರಮ ಸರ್ಕಾರದ ಕೈಮೀರಿ ಹೋಗಿದೆ. ಒಂದು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಬಾಟಲ್‌ ನೀರಿನಲ್ಲಿ ಮಾದಕ ವಸ್ತು ಬೆರೆಸಿ ಸೇವಿಸಿದ್ದಳು. ನಂತರ ಶಿಕ್ಷಕರಿಗೆ ವೆರಿ ಗುಡ್‌ ಎಂದು ಹೇಳುತ್ತಿದ್ದಳು, ವಿಚಾರಿಸಿ ನೋಡಿದಾಗ ಆಕೆ ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ. ಮಾದಕ ವಸ್ತು ಸೇವಿಸುವವರಲ್ಲಿ ಶಾಲೆಗಳ 15% ಮಕ್ಕಳು ಇದ್ದಾರೆ ಎಂಬುದು ಆಘಾತಕಾರಿ. ಚಾಕೋಲೇಟ್‌ ಮೂಲಕ ಮಾದಕ ವಸ್ತು ನೀಡಿ ಬಳಿಕ ಅವರನ್ನು ವ್ಯಸನಿಗಳಾಗಿ ಮಾಡುತ್ತಾರೆ. ರಾಜ್ಯಕ್ಕೆ 150 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಬರುತ್ತಿವೆ. ಪೊಲೀಸ್‌ ಇಲಾಖೆಯಲ್ಲಿ ಡ್ರಗ್ಸ್‌ ಜಾಲದೊಂದಿಗೆ ಇರುವವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಆರ್​ ಅಶೋಕ್​ ಒತ್ತಾಯಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp