BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಕಾರವಾರಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Author Picture
Published On: December 27, 2025

—Advertisement—

Updated By: Priyalachhi

​ಕಾರವಾರ: ರಾಷ್ಟ್ರಪತಿ, ಭಾರತದ ಸಶಸ್ತ್ರ ಪಡೆಗಳ ಮಹಾದಂಡನಾಯಕಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 28ರ ಭಾನುವಾರ ಕಾರವಾರದ ಕದಂಬ ನೌಕಾನೆಲೆಗೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. ಏಷ್ಯಾದ ಅತಿದೊಡ್ಡ ನೌಕಾನೆಲೆಯಾಗಿ ಅಭಿವೃದ್ಧಿ ಹೊಂದುತ್ತಿರುವ ‘ಸೀಬರ್ಡ್’ಗೆ ರಾಷ್ಟ್ರಪತಿಗಳು ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಕರಾವಳಿಯಲ್ಲಿ ಬಿಗಿ ಭದ್ರತೆ ಹಾಗೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

​ಜಲಾಂತರ್ಗಾಮಿಯಲ್ಲಿ ಸಮುದ್ರಯಾನ: ​ರಾಷ್ಟ್ರಪತಿಗಳ ಕಾರ್ಯಾಲಯದ ಪ್ರಕಟಣೆಯಂತೆ, ಡಿ. 27ರಂದು ಗೋವಾಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು, ಡಿ. 28ರಂದು ಬೆಳಗ್ಗೆ ಕಾರವಾರಕ್ಕೆ ಬರಲಿದ್ದಾರೆ. ಕಾರವಾರದ ನೌಕಾ ದಕ್ಕೆಯಿಂದ ಜಲಾಂತರ್ಗಾಮಿಯೊಂದರಲ್ಲಿ (Submarine) ಸಮುದ್ರಯಾನ (Sea Sortie) ಕೈಗೊಳ್ಳಲಿರುವುದು ಈ ಭೇಟಿಯ ವಿಶೇಷವಾಗಿದೆ. ಮಧ್ಯಾಹ್ನದ ನಂತರ ಅವರು ಕಾರವಾರದಿಂದ ನಿರ್ಗಮಿಸಲಿದ್ದು, ಡಿ. 29ರಂದು ಜಾರ್ಖಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

​ರಾಜ್ಯಪಾಲರಿಂದ ಸ್ವಾಗತ: ​ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಕಾರವಾರಕ್ಕೆ ಆಗಮಿಸಲಿದ್ದಾರೆ. ನೌಕಾಸೇನೆಯ ಅಧಿಕೃತ ಕಾರ್ಯಕ್ರಮ ಇದಾಗಿರುವುದರಿಂದ, ನೌಕಾನೆಲೆಯ ಹಿರಿಯ ಅಧಿಕಾರಿಗಳು ಹಾಗೂ ಪಿಆರ್‌ಒ ಅರವಿಂದ್ ನೇತೃತ್ವದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

​ಮೀನುಗಾರಿಕೆ ನಿಷೇಧ ಮತ್ತು ಭದ್ರತೆ: ​ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 28ರ ಬೆಳಗ್ಗೆಯಿಂದ ಮಧ್ಯಾಹ್ನ 3:30ರ ವರೆಗೆ ಕಾರವಾರದ ಮಾಜಾಳಿಯಿಂದ ಹಾರವಾಡದವರೆಗೆ ಸಮುದ್ರದಲ್ಲಿ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp