Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಕುರ್ಚಿಗಾಗಿ ಗುದ್ದಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮೊದಲ ಬಾರಿಗೆ ಡಿಸಿಎಂ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು.. ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ತೆರೆ ಎಳೆದಿದ್ದಾರೆ.

ಬ್ರೇಕ್​ಫಾಸ್ಟ್​ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್​, ಇನ್ನು ರಾಜಕಾರಣ ಇಲ್ಲ. ಏನಿದ್ರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್​ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ ಎಂದಿದ್ದಾರೆ.

ನನ್ನ ಆಹ್ವಾನದ ಮೇರೆಗೆ ಮನೆಗೆ ಬಂದು ಉಪಾಹಾರ ಸೇವಿಸಿದ ಡಿಕೆ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಅವರೂ ಕೂಡ ನನ್ನನ್ನು ಮನೆಗೆ ಉಪಾಹಾರಕ್ಕಾಗಿ ಆಮಂತ್ರಣ ನೀಡಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಗಟ್ಟಿಯಾಗಿದ್ದು, ಯಾರೂ ಕೂಡ ಈ ಒಗ್ಗಟ್ಟನ್ನು ಮುರಿಯಲಾರರು” ಎಂದು ಸಿದ್ದರಾಮಯ್ಯ ಹೇಳಿದರು.

ಬೆಳಗಿನ ಉಪಾಹಾರ ಸಭೆಯು ಸೌಜನ್ಯದ ಭೇಟಿಯಾಗಿದ್ದು, ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಲಿಲ್ಲ. ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಸಂಬಂಧ ಅತ್ಯಂತ ಗಟ್ಟಿಯಾಗಿದ್ದು, ಅದನ್ನು ಯಾರೂ ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version