BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಕೃಷ್ಣ ಬೈರೇಗೌಡ ಮೇಲೆ ಬಿಜೆಪಿಯಿಂದ ಸ್ಮಶಾನ ಜಮೀನು ಕಬಳಿಕೆ ಆರೋಪ; ತನಿಖೆಗೆ ಸಿದ್ಧ ಎಂದ ಸಚಿವರು

Author Picture
Published On: December 17, 2025

—Advertisement—

Updated By: Priyalachhi

ಬೆಳಗಾವಿ: ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಮ್ಮ ಹೆಸರಿಗೆ ಸ್ಮಶಾನ ಜಮೀನು ಬರೆಸಿಕೊಂಡಿದ್ದು, ಅವರು ರಾಜೀನಾಮೆ ನೀಡುವಂತೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.‌

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ 14 ಸೈಟು ಪಡೆದು ವಾಪಸ್ ಕೊಟ್ಟರು. ಪ್ರಿಯಾಂಕ್ ಖರ್ಗೆ ಐದು ಎಕರೆ ಜಾಗ ಪಡೆದು ವಾಪಸ್ ನೀಡಿದರು. ಇವೆರಡೂ ಪ್ರಕರಣಗಳೇ ಅಲ್ಲ, ಕದ್ದ ಮಾಲು ವಾಪಸ್ ಕೊಟ್ಟರೆ ಅದು ಕಳ್ಳತನವೇ ಅಲ್ಲ ಎಂಬಂತೆ ಪ್ರದರ್ಶನ ಮಾಡಿದರು. ಈಗ ಕೋಲಾರ ಜಿಲ್ಲೆಯ ಗರುಡನಪಾಳ್ಯ ಗ್ರಾಮದಲ್ಲಿ ಸರ್ವೆ ನಂ.47ರಲ್ಲಿನ 1 ಎಕರೆ ಜಾಗ, ಗರುಡನಪಾಳ್ಯ, ನರಸಾಪುರ ಹೋಬಳಿಯ ಸರ್ವೆ 46ರಲ್ಲಿನ 20.16 ಎಕರೆ ಜಾಗ ಸೇರಿ ಒಟ್ಟು 21.16 ಎಕರೆಯ ಕೋಟ್ಯಂತರ ಮೌಲ್ಯದ ಸ್ಮಶಾನದ ಜಮೀನನ್ನು ಸಚಿವ ಕೃಷ್ಣ ಬೈರೇಗೌಡ ಕಬಳಿಸಿದ್ದಾರೆ. ಸ್ಮಶಾನವನ್ನು ಯಾರೂ ಕೂಡ ತಮ್ಮ ಹೆಸರಿಗೆ ಮಾಡಿಕೊಳ್ಳಲು ಆಗಲ್ಲ. ಆದರೆ ಅಕ್ರಮ ಎಸಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

ದಾಖಲೆ ಪ್ರಕಾರ, ಇದು ಕೆರೆ ಜಮೀನು, ಅದನ್ನು ಸ್ಮಶಾನಕ್ಕೆ ಬಿಡಲಾಗಿದೆ.‌ ಕೆರೆ ಜಾಗವನ್ನು ಕೃಷ್ಣ ಬೈರೇಗೌಡ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಮೂಲ ದಾಖಲೆಗಳ ಪ್ರಕಾರ, ಸರ್ಕಾರಿ ಸ್ಮಶಾನ ಖರಾಬು ಅಂತ ಇದೆ. ಈ ಜಮೀನು ಕಂದಾಯ ಸಚಿವರ ಖಾತೆಗೆ ಹೇಗೆ ಬರುತ್ತದೆ? ಕೃಷ್ಣ ಬೈರೇಗೌಡ ಹೆಸರಿಗೆ ಸ್ಮಶಾನ ಖರಾಬು ಜಮೀನು ಯಾಕೆ ಬಂದಿದೆ? ಎಂದು ಪ್ರಶ್ನಿಸಿದರು.

ಹೀಗಾಗಿ, ಸಚಿವರು ರಾಜೀನಾಮೆ ಕೊಡಬೇಕು. ಮಿಸ್ಟರ್ ಕ್ಲೀನ್ ಅಂತ ಬಿಂಬಿತವಾಗಿದೆ. ‘ಹಿ ಈಸ್ ನಾಟ್ ಮಿಸ್ಟರ್ ಕ್ಲೀನ್. ಹಿ ಶುಡ್ ರಿಸೈನ್’. ಸರ್ಕಾರ ಇದನ್ನು ತಕ್ಷಣ ತನಿಖೆಗೆ ಒಳಪಡಿಸಬೇಕು. 6./11/1978ರಲ್ಲಿ ಕೆರೆ ಅಂತ ಇದೆ. ಈಗ ಎಲ್ಲ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿದೆ. ಎರಡೂ ಕೂಡ 20/04/2024ರಲ್ಲಿ ಕೃಷ್ಣ ಬೈರೇಗೌಡ ಹೆಸರಲ್ಲಿಯೇ ಇದೆ. ಮಾರುಕಟ್ಟೆ ವ್ಯಾಲ್ಯೂ ಐದಾರು ಕೋಟಿ ಆಗುತ್ತದೆ. ಕೃಷ್ಣ ಬೈರೇಗೌಡ ಬಿನ್ ಸಿ.ಬೈರೇಗೌಡ. ಅವರಲ್ಲ ಅನ್ನುವುದಾದರೆ ಹೇಳಿಕೆ ಕೊಡಲಿ. ಅವರ ಇಡೀ ಕುಟುಂಬದ ಹೆಸರುಗಳು ಇಲ್ಲಿವೆ ಎಂದು ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದರು.‌

ಎನ್.ರವಿಕುಮಾರ್ ಮಾತನಾಡಿ, 14 ಸೈಟು ವಾಪಸ್ ಕೊಟ್ಟರು, ಹ್ಯುಬ್ಲೊಟ್ ವಾಚ್ ವಾಪಸ್ ಕೊಟ್ಟರು. ಈಗ ಕೃಷ್ಣ ಬೈರೇಗೌಡ ಸರದಿ. ಕೆರೆಯ, ಸ್ಮಶಾನದ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಕೆರೆ ಹಾಗೂ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಳ್ಳಲು ಆಗುವುದಿಲ್ಲ. ಕೆರೆಗೆ ಮಾರ್ಕ್ ಮಾಡಿ ಖರಾಬು ಅಂತ ಹೇಗೆ ಮಾಡಿದರು? ಸಿಲ್ವರ್ ಟೀಕ್ ಬೆಳೆಯುತ್ತಾರಂತೆ ಅಲ್ಲಿ. ಇದನ್ನು ತನಿಖೆಗೆ ಒಳಪಡಿಸಬೇಕು, ಸಿಎಂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ವತಂತ್ರ್ಯವಾಗಿ ತನಿಖೆ ಮಾಡಲಿ: ಈ ಬಗ್ಗೆ ಸ್ಪಷ್ಟನೆ ಮಾಡಿದ ಸಚಿವ ಕೃಷ್ಣ ಬೈರೇಗೌಡ, ಇಲ್ಲದೇ ಇರುವುದನ್ನು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ. ನಮ್ಮ ತಾತನವರಿಂದ ನಮಗೆ ವಿಭಾಗದ ಮೂಲಕ ಬಂದಿರುವ ಆಸ್ತಿ. ಗ್ರ್ಯಾಂಟ್ ಮಾಡಿಸಿಕೊಂಡಿರುವುದು ಅಲ್ಲ. ಕ್ರಮದ ಮೂಲಕ ತೆಗೆದುಕೊಂಡು, ಕುಟುಂಬದಲ್ಲಿ ಭಾಗ ಆಗಿ ಬಂದಿದೆ. ಹಿಂದೆ ಏನಾಗಿದೆ ಅಂತಾ ಅವರು ಚೆಕ್ ಮಾಡಲಿ. ನಮ್ಮ ತಾತನವರು ಖರೀದಿ ಮಾಡಿ ಬಂದಿರುವುದು ಅಲ್ವಾ ಅಂತಾ ಚೆಕ್ ಮಾಡಲಿ.‌ ಲೋಕಾಯುಕ್ತರಿಗೆ ಬೇಕಾದರೆ ದೂರು ಕೊಡಲಿ ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp