Updated By: Priyalachhi 

ಕೋಲಾರ: ಬೆಂಗಳೂರು ಉತ್ತರ ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು? ಬಾಂಗ್ಲಾದಿಂದ ಅಕ್ರಮವಾಗಿ ಬಂದಿದ್ದರೆ ಬಂಧಿಸಿ ಜೈಲಿಗೆ ಹಾಕಲಿ ಎಂದು ಸವಾಲು ಹಾಕಿದರು.

ರಾಜ್ಯದವರು ಅಥವಾ ಅಕ್ಕಪಕ್ಕದ ರಾಜ್ಯದವರು ಆಗಿದ್ದರೆ ಅರ್ಹರಿಗೆ ಮನೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಸುತ್ತಮುತ್ತ ಬಿಜೆಪಿ ಶಾಸಕರು ಭೂ ಮಂಜೂರಾತಿ ಸಮಿತಿ ಮೂಲಕ ಸಾವಿರಾರು ಎಕರೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version