BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್

Author Picture
Published On: January 1, 2026

—Advertisement—

Updated By: Priyalachhi 

ಬೆಂಗಳೂರು: “ಕೋಗಿಲು ಅಕ್ರಮ ಗುಡಿಸಲು-ಮನೆ ತೆರವು ಪ್ರಕರಣದಲ್ಲಿ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ” ಎಂದು ಶಾಸಕ ಎಸ್.ಆರ್​. ವಿಶ್ವನಾಥ್ ಎಚ್ಚರಿಸಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್​​ ಬಳಿಯಿರುವ ಫಕೀರ್​​​ ಕಾಲೋನಿ ಮತ್ತು ನಸೀಮ್​​ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತು ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಆ ತಂಡ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಭೆ ನಡೆಸಿತು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಆರ್​. ವಿಶ್ವನಾಥ್​​, “ಬಿಬಿಎಂಪಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಇವತ್ತು ನಿಜವಾದ ಫಲಾನುಭವಿ 10.5 ಲಕ್ಷ ರೂಪಾಯಿ ದುಡ್ಡು ಕಟ್ಟಬೇಕಾಗುತ್ತದೆ. ಬ್ಯಾಂಕ್ ಸಾಲ; ಇಲ್ಲವೇ ಸ್ವಂತ ಪ್ರಯತ್ನದಿಂದ ಇದನ್ನು ಕಟ್ಟಬೇಕು. ಇವನಿಗೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ, ಅಲ್ಪಸಂಖ್ಯಾತ ಇಲಾಖೆಯಿಂದ ಎರಡೂವರೆ ಲಕ್ಷ ರೂಪಾಯಿ. ಇವೆಲ್ಲವನ್ನು ಕೊಟ್ಟು ಕೇವಲ ಎರಡೂವರೆ ಲಕ್ಷದಲ್ಲಿ ಮನೆ ಕೊಡುತ್ತೇವೆ ಅಂದರೆ ಈಗ ಏನು ಒಂದು ಲಕ್ಷ ಮನೆಗಳನ್ನು ಕಟ್ಟುತ್ತಿದ್ದಾರೆ. ಬೆಂಗಳೂರು ಸುತ್ತು ಮುತ್ತಲು 45 ಸಾವಿರ ಮನೆಗಳು ಆಗುತ್ತಿವೆ. ಅವರು ಯಾರೂ ಕೂಡ ದುಡ್ಡು ಕಟ್ಟಲ್ಲ. ಅವರೆಲ್ಲ 2.5 ಲಕ್ಷಕ್ಕೇ ಸ್ಟಿಕ್ ಆನ್ ಆಗುತ್ತಾರೆ. ಇದು ಸರ್ಕಾರಕ್ಕೆ ದೊಡ್ಡ ಮುಜುಗರ ಆಗಲಿದೆ. ದೊಡ್ಡ ಹೊಡೆತ ಕೊಡಲಿದೆ. ಇದಕ್ಕೂ ಮೀರಿ ಏನಾದ್ರೂ ಮನೆಗಳನ್ನು ಕೊಟ್ಟರೆ ನ್ಯಾಯಾಲಯಕ್ಕೆ ಹೋಗುತ್ತೇವೆ. ಈಗಾಗಲೇ ದಾಖಲೆಗಳನ್ನು ಕೂಡ ಸಂಗ್ರಹ ಮಾಡುತ್ತಿದ್ದಾರೆ” ಎಂದರು.

“ನ್ಯಾಯಾಲಯಕ್ಕೆ ಹೋಗಿ ಪ್ರಶ್ನೆ ಮಾಡುವುದಲ್ಲದೇ ಮಾನ್ಯ ರಾಜ್ಯಪಾಲರಿಗೆ ಇದರ ಬಗ್ಗೆ ಮನವಿ ಕೊಡುತ್ತೇವೆ ಎಂದರು. ನಾಳೇನೆ ಮನೆಗಳ ಹಂಚಿಕೆ ಮಾಡಲಿಕ್ಕೆ ಪ್ಲಾನ್​​ ಮಾಡ್ಕೊಂಡಿದ್ದೀರಾ?. ಅದು ಸಾಧ್ಯ ಇಲ್ಲ. ಸುಮ್ಮನೆ ಅವರು ಹೇಳಿರಬಹುದು. ಅವರು ಇಲ್ಲಿ ಐದು ವರ್ಷ ವಾಸ ಇದ್ದಾರೆ ಅನ್ನೋದಕ್ಕೆ ದಾಖಲೆಗಳನ್ನು ಕೊಡಬೇಕು. 18 ದಾಖಲೆಗಳನ್ನು ಕೇಳಿದ್ದಾರೆ ಅವನ್ನು ಕೊಡಬೇಕು. ಯಾವ ವಿಶೇಷ ಪ್ರಕರಣ? ಹಾಗೆಲ್ಲ ಮಾಡಲು ಆಗೋದಿಲ್ಲ” ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp