BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಗೋಕಾಕ್ ಜಿಲ್ಲೆಗೆ ಆಗ್ರಹಿಸಿ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ನಿಯೋಗ

Author Picture
Published On: December 9, 2025

—Advertisement—

Updated By: Priyalachhi

ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿತು.

ಸೋಮವಾರ ಸಂಜೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ತಮ್ಮ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ್ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ, ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಅಮರ ಸಿದ್ದೇಶ್ವರ ಸ್ವಾಮೀಜಿ, ಮುಖಂಡ ಅಶೋಕ ಪೂಜಾರಿ ಸೇರಿ ಮತ್ತಿತರರು ಇದ್ದರು.

ಮುಖ್ಯಮಂತ್ರಿಗಳ ಭೇಟಿ ಬಳಿಕ‌ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜನೆ ವಿಚಾರಕ್ಕೆ ಇತಿಶ್ರೀ ಹಾಡುವಂತೆ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಮೇಲೆ ನಾವು ಒತ್ತಡ ಹೇರುತ್ತಿದ್ದೇವೆ. ಗೋಕಾಕ್ ಮತ್ತು ಚಿಕ್ಕೋಡಿ ಜಿಲ್ಲೆ ಆಗಬೇಕು ಅಂತಾ ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ ಸಭೆ ಕರೆದು, ಅಂತಿಮ ನಿರ್ಣಯ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದೇ ಮೊದಲ ಬಾರಿ ಮುಖ್ಯಮಂತ್ರಿಗಳು ಶಾಸಕರ ಸಭೆ ಕರೆಯುತ್ತಿದ್ದಾರೆ.

20 ವರ್ಷಗಳ ಹಿಂದೆ ಆಯೋಗಗಳು ಶಿಫಾರಸು ಮಾಡಿರುವಂತೆ ಗೋಕಾಕ್, ಚಿಕ್ಕೋಡಿ‌ ಜಿಲ್ಲೆ ಆಗಬೇಕು. ಅಥಣಿ, ಬೈಲಹೊಂಗಲ ಜಿಲ್ಲೆ ಆಗುವುದು ಕಷ್ಟದ ಕೆಲಸ. ಆರ್ಥಿಕ ಹಿನ್ನೆಲೆ ಸೇರಿ ಎಲ್ಲ ಸೌಲಭ್ಯಗಳ ಆಧಾರದ ಮೇಲೆ ಗೋಕಾಕ್, ಚಿಕ್ಕೋಡಿ ಜಿಲ್ಲೆಯಾದರೆ ಒಳ್ಳೆಯದು. ಆದಷ್ಟು ಬೇಗನೇ ಇತ್ಯರ್ಥ ಪಡಿಸುವಂತೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಎರಡು ದಿನಗಳಲ್ಲಿ ಸಭೆ ಕರೆಯುವುದಾಗಿ ಸಿಎಂ ಹೇಳಿದ್ದಾರೆ. ಸಭೆಯಲ್ಲಿ ಏನು ಅಭಿಪ್ರಾಯ ಬರುತ್ತದೆ ನೋಡೋಣ ಎಂದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ್ ಜಿಲ್ಲೆ ಮಾಡುವಂತೆ ಹೇಳಿದ್ದೇವೆ. ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಿದ್ದಾರೆ. ದೊಡ್ಡ ಜಿಲ್ಲೆ ಆಗಿರುವ ಬೆಳಗಾವಿಯನ್ನು ಆಡಳಿತದ ದೃಷ್ಟಿಯಿಂದ ವಿಭಜನೆ ಮಾಡಬೇಕು ಎಂದಿದ್ದಾರೆ. ಬೆಳಗಾವಿ ಜಿಲ್ಲೆಯ ಎಲ್ಲಾ 18 ಶಾಸಕರನ್ನು ಕರೆದು ಅಭಿಪ್ರಾಯ ಪಡೆದು ನಿರ್ಣಯ ಮಾಡೋದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಇನ್ನು ಜಿಲ್ಲಾ ವಿಭಜನೆಯಾದರೆ ಮೊದಲು ಗೋಕಾಕ ಜಿಲ್ಲೆ ಆಗಲಿ ಅಂತಾ ನಾವೆಲ್ಲಾ ಹೇಳಿದ್ದೇವೆ. ಆಯೋಗಗಳ ವರದಿಯಂತೆ ಗೋಕಾಕ್ ಜಿಲ್ಲೆ ಮಾಡಬೇಕೆಂದು ಒತ್ತಾಯ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಜಿಲ್ಲಾ ವಿಭಜನೆ ಆಗುವ ಆಶಯ ಇದೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp