• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ

Sambrama Prabha News by Sambrama Prabha News
May 15, 2026
in Nation News
0
ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಬೆರೆ ಏರಿಕೆ ಶಾಕ್​ ಕೊಟ್ಟಿದ್ದಾರೆ.

ಇಂದು ಬೆಳಗ್ಗೆಯಿಂದ ಪೆಟ್ರೋಲ್, ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್‌ ಪ್ರಯಾಣ ದರ ಏರಿಕೆಗೆ ತೀರ್ಮಾನಿಸಲಾಗಿದೆ.

ಶೇ.20 ರಿಂದ ಶೇ. 30ರಷ್ಟು ಟಿಕೆಟ್ ದರ ಏರಿಕೆ ಮಾಡುವ ಬಗ್ಗೆ ಖಾಸಗಿ ಬಸ್​​ ಮಾಲಕರು ಮಾಹಿತಿ ನೀಡಿದ್ದಾರೆ.

ಪ್ರತಿದಿನ ಬಸ್​​ ಒಂದಕ್ಕೆ ಕನಿಷ್ಠ 150 ಲೀಟರ್ ಡಿಸೇಲ್​​ ಹಾಕಿಸುತ್ತೇವೆ. ಇಂಧನ ಬೆಲೆಯಲ್ಲಿ 3 ರೂ. ಹೆಚ್ಚಳವಾಗಿರುವ ಕಾರಣ ನಿತ್ಯ 450 ರೂಪಾಯಿ ಹೆಚ್ಚುವರಿಯಾಗಿ ನಮಗೆ ಹೊರೆಯಾಗಲಿದೆ. ಹೀಗಾಗಿ ಟಿಕೆಟ್​ ದರ ಏರಿಸೋದು ನಮಗೂ ಅನಿವಾರ್ಯವಾಗಿದೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಉಂಟಾಗಲಿದೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ತಿಳಿಸಿದ್ದಾರೆ.

ಜನ ಸಾಮಾನ್ಯರ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್​-ಡೀಸೆಲ್​, ಚಿನ್ನ-ಬೆಳ್ಳಿ, ಅಕ್ಕಿ-ಬೆಳ್ಳಿಯಿಂದಿಡಿದು ಪ್ರತಿಯೊಂದು ವಸ್ತುವಿನ ಬೆಲೆ ಕೂಡ ಗಗನಕ್ಕೇರಿದೆ. ಇದೀಗ ಬಸ್​ ಟಿಕೆಟ್​ ದರ ಕೂಡ ಹೆಚ್ಚಿದ್ದು, ಪ್ರಯಾಣಿಕರಿಗೆ ನುಂಗಲಾರದ ತುತ್ತಾಗಿದೆ.

Tags: ಬೆಲೆ ಏರಿಕೆ
Previous Post

ಕರ್ನಾಟಕ ಬಿಜೆಪಿ ನಾಯಕರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ

Next Post

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ

Next Post
ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.