• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!

Sambrama Prabha News by Sambrama Prabha News
April 18, 2026
in Latest News, Nation News
0
ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ.

ಇದಾದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.

ಹಡಗು ಹಾಗೂ ಅದರ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಹಡಗು ಭದ್ರತೆಯನ್ನು ಮೇಲ್ವಿಚಾರಣೆ ಮಾಡುವ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ಹೇಳಿದೆ. ಆದರೆ ಅದು ಯಾವ ರಾಷ್ಟ್ರದ ಹಡಗು, ಎಲ್ಲಿಗೆ ಹೋಗುತಿತ್ತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ.

ಇರಾನಿನ ಹಡಗು ಸಂಚಾರ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ, ಪ್ರಮುಖ ಜಾಗತಿಕ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಗೆ ಮತ್ತೆ ನಿರ್ಬಂಧ ಹೇರುವುದಾಗಿ ಇರಾನ್ ಘೋಷಿಸಿದ ನಂತರ ಈ ಘಟನೆ ನಡೆದಿದೆ.

ಭಾರತೀಯ ಹಡಗುಗಳು ವಾಪಸ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುಂಡಿನ ದಾಳಿ ಬೆನ್ನಲ್ಲೇ, ಹಾರ್ಮುಜ್ ಜಲಸಂಧಿಯಲ್ಲಿ ಎರಡು ಭಾರತೀಯ ಹಡಗುಗಳು ತಮ್ಮ ದಿಕ್ಕನ್ನು ಬದಲಾಯಿಸಿವೆ ಎಂದು ಹಡಗು ಟ್ರ್ಯಾಕಿಂಗ್ ಸೇವಾ ಸಂಸ್ಥೆ ತಿಳಿಸಿದೆ.

ಹಡಗು ಮೇಲ್ವಿಚಾರಕ TankerTrackers.com ಪ್ರಕಾರ, ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕಿ ಕಚ್ಚಾ ತೈಲವನ್ನು ಸಾಗಿಸುತ್ತಿದ್ದ ಭಾರತೀಯ ಧ್ವಜವನ್ನು ಹೊಂದಿರುವ ಸೂಪರ್ ಟ್ಯಾಂಕರ್ ಹಡಗು ವಾಪಸ್ಸಾಗಿದೆ ಎನ್ನಲಾಗಿದೆ.

Tags: ಹಡಗು
Previous Post

ಬದಲಾದ ಜೀವನಶೈಲಿ; ಯುವಕರಲ್ಲಿ ಹೆಚ್ಚುತ್ತಿದೆ ಟೈಪ್ 2 Diabetes..!

Next Post

ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ: R ಅಶೋಕ್ ವ್ಯಂಗ್ಯ

Next Post
ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ: R ಅಶೋಕ್ ವ್ಯಂಗ್ಯ

ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ: R ಅಶೋಕ್ ವ್ಯಂಗ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.