BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಡಿಕೆಶಿ ಮನೆಯಲ್ಲಿ ಸಿಎಂಗೆ ಬ್ರೇಕ್‌ಫಾಸ್ಟ್

Author Picture
Published On: December 2, 2025

—Advertisement—

Updated By: Priyalachhi

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇನ್ನೊಂದೆಡೆ ಸಿಎಂ-ಡಿಸಿಎಂ ನಡುವೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಇತ್ತೀಚೆಗೆ ಸಿಎಂ ಆಯೋಜಿಸಿದ ಬ್ರೇಕ್‌ಫಾಸ್ಟ್ ಬಳಿಕ ಇಂದು ಡಿಸಿಎಂ ಡಿಕೆಶಿ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಬೆಳಗ್ಗೆ 9.30ಕ್ಕೆ ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಉಭಯ ನಾಯಕರು ಬ್ರೇಕ್‌ಫಾಸ್ಟ್ ಮಾಡಲಿದ್ದಾರೆ.

ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜಿಸಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ಇಂದು ಸಿಎಂಗೆ ಡಿಸಿಎಂ ಬ್ರೇಕ್‌ಫಾಸ್ಟ್ ಆತಿಥ್ಯ ನೀಡಲಿದ್ದು, ಸಹಜವಾಗಿಯೇ ರಾಜಕೀಯವಾಗಿ ಕುತೂಹಲ ಮೂಡಿಸಿದೆ.

ನಾನು ಮತ್ತು ಸಿಎಂ ಸಹೋದರರಂತೆ ಕೆಲಸ ಮಾಡ್ತಿದ್ದೀವಿ-ಡಿಕೆಶಿ: ಬ್ರೇಕ್‌ಫಾಸ್ಟ್ ಸಭೆ ಬಗ್ಗೆ ಸೋಮವಾರ ಮಾತಾಡಿರುವ ಡಿಕೆಶಿ, “ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ. ಗುಂಪು ಇಲ್ಲ. ನಾನು ಮತ್ತು ಸಿಎಂ ಸಹೋದರರಂತೆ ಕೆಲಸ ಮಾಡ್ತಿದ್ದೀವಿ. 140 ಜನ ಶಾಸಕರೂ ನಮ್ಮವರೇ, ಒಟ್ಟಿಗೇ ಹೋಗ್ತೀವಿ. ಬ್ರೇಕ್‌ಫಾಸ್ಟ್ ಎಲ್ಲ ಅಗತ್ಯವಿಲ್ಲ. ಆದರೂ ಮಾಧ್ಯಮಗಳ ಒತ್ತಡಕ್ಕೆ ಇದೆಲ್ಲ ಅಂದಿದ್ದಾರೆ” ಎಂದು ಹೇಳಿದರು.

ನಾಳೆ ಪಕ್ಷದ ಗೊಂದಲಗಳ ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆಯೂ ಸಿಎಂ – ಡಿಸಿಎಂ ತೀರ್ಮಾನ ಮಾಡುವ ಸಾಧ್ಯತೆ ಇದೆ. ಇಂದಿನಿಂದ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಸಂಸತ್​ನಲ್ಲಿ ರಾಜ್ಯದ ಜಲ ಯೋಜನೆ, ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ, ಅನುದಾನ ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಕೇಂದ್ರದ ಗಮನಕ್ಕೆ ತರಲು ನಿಯೋಗ ಕೊಂಡೊಯ್ಯಲಿದ್ದಾರೆ. ಈ ವಾರದಲ್ಲೇ ದೆಹಲಿಗೆ ಸಿಎಂ-ಡಿಸಿಎಂ ಹೋಗುವ ಸಾಧ್ಯತೆಯಿದ್ದು, ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ರಾಜ್ಯದ ಎಲ್ಲ ಸಂಸದರೊಂದಿಗೆ ಚರ್ಚೆ ನಡೆಸಿ ಪ್ರಧಾನಿ ಹಾಗೂ ಕೇಂದ್ರದ ಸಚಿವರಿಗೆ ಮನವಿ ಕೊಡಲಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp