BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ಸಿದ್ಧ: ಶಾಸಕ ಶಿವಗಂಗಾ ಬಸವರಾಜ್

Author Picture
Published On: February 7, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ದಾವಣಗೆರೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ಮತ್ತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಬೀಸಿದ್ದು, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಒಪ್ಪಂದ ಆಗಿರೋದು ಸತ್ಯ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 139 ಶಾಸಕರ ಬೆಂಬಲ ಡಿಸಿಎಂ ಡಿ ಕೆ ಶಿವಕುಮಾರ್ ಇದೆ. 40 ರಿಂದ 50 ಜನ ನಮ್ಮಂತ ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಿದ್ದೇವೆ. ಅವರು ಪ್ರಾಣ ಕೇಳಿದರೂ ಕೊಡೋಕೆ ನಾವುಗಳು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಸಿಎಂ ಸಿದ್ದರಾಮಯ್ಯ ಐದು ವರ್ಷದ ತನಕ ಸಿಎಂ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಪದೇ ಪದೆ ಹೇಳಿಕೆ ನೀಡುತ್ತಲೇ ಇದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಪಕ್ಷದ ಹೈಕಮಾಂಡ್​ ಗಮನಿಸಿದೆ.‌ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಾ ಗಾಂಧಿ ಇದ್ದಾರೆ. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆಯಾ? ಇಲ್ಲವಾ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.

ಡಿಕೆಶಿ ಸಾಹೇಬರು ಹೇಳಿದಂತೆ ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್. ಪದೇ ಪದೆ ಮಾಧ್ಯಮಗಳ ಮುಂದೆ ಬಂದು ಪಕ್ಷಕ್ಕೆ ಡ್ಯಾಮೇಜ್ ಆಗುವ ಕೆಲಸ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಅವರ ಹೈಕಮಾಂಡ್​ ಯತೀಂದ್ರ ಅವರಿರಬಹುದು. ನಮ್ಮ ಹೈಕಮಾಂಡ್ ಬೇರೆ ಇದೆ. ಖರ್ಗೆ ಸಾಹೇಬರು, ರಾಹುಲ್ ಗಾಂಧಿಯವರು ಇದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp