Updated By: Priyalachhi 

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.28ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ (26) ಆತ್ಮಹತ್ಯೆ ಮಾಡಿಕೊಂಡವರು.

ಮೈಲಸಂದ್ರದ ಇನ್ಸ್ಟಾ ಲಿವಿಂಗ್ ಪಿಜಿಯಲ್ಲಿ ಇವರು ವಾಸವಾಗಿದ್ದರು. ತಾಯಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಂದಿನಿ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ‘ಗೌರಿ’ ಧಾರವಾಹಿ ಹಾಗೂ ನೆರೆಯ ತಮಿಳು ಭಾಷೆಯ ಸೀರಿಯಲ್​ನಲ್ಲಿ ನಟಿಸಿದ್ದರು‌.

ನಟನಾ ಕ್ಷೇತ್ರದಲ್ಲಿ ತೀವ್ರ ಒಲವಿದ್ದ ನಂದಿನಿ, ಸಾವಿಗೆ ಮುನ್ನ ಡೈರಿಯಲ್ಲಿ ಬರೆದ ಡೆತ್ ನೋಟ್ ಪತ್ತೆಯಾಗಿದೆ. “ನನಗೆ ಸರ್ಕಾರಿ ಕೆಲಸ ಮಾಡಲು ಇಷ್ಟವಿಲ್ಲ, ಆ್ಯಕ್ಟಿಂಗ್​ ಇಷ್ಟ. ಮನೆಯಲ್ಲಿ ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ” ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂದಿ‌ನಿಯ ತಂದೆ ಎಸ್.ಮಹಾಬಲೇಶ್ವರ ಅವರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ 2021ರಲ್ಲಿ ಮೃತಪಟ್ಟಿದ್ದರು. 2023ರಲ್ಲಿ ಮಗಳು ನಂದಿನಿಗೆ ಅನುಕಂಪ ಆಧಾರದ ಮೇಲೆ ತಾಲೂಕು ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು‌. ಆದರೆ ನಂದಿನಿ ಕೆಲಸಕ್ಕೆ ಹೋಗದೇ, ತನಗೆ ನಟನಾ ಕ್ಷೇತ್ರದಲ್ಲಿ ಆಸಕ್ತಿ ಇದೆ. ನನ್ನಿಷ್ಟದಂತೆ ಬದುಕುತ್ತೇನೆಂದು ಮನೆಯಲ್ಲಿ ಹಠ ಮಾಡಿ, ಬೆಂಗಳೂರಿಗೆ ಬಂದು ಪಿಜಿಯಲ್ಲಿ ವಾಸವಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version