BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್

Author Picture
Published On: November 18, 2025

—Advertisement—

Updated By: Priyalachhi

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿ ಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಸಂಚಾರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನೂ ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು‌ ಎಂದು ಪರಮೇಶ್ವರ್​ ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp