ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಇಂದು ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವುಗಳ ಮಧ್ಯೆ ಸಮಾವೇಶಕ್ಕೆ ಮುನ್ನ ಸಚಿವ ಸತೀಶ್​​ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರು ಇಂದು ಸಭೆ ನಡೆಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿವೆ.

ಬ್ರೇಕ್ ಫಾಸ್ಟ್ ಮೀಟಿಂಗ್

ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರಾದ ಹೆಚ್ ಸಿ ಮಹದೇವಪ್ಪ, ಜಮೀರ್ ಅಹಮದ್, ಕೆ ವೆಂಕಟೇಶ್ ಮಹತ್ವದ ಸಭೆ ನಡೆಸಿದ್ದು, ಪ್ರಸಕ್ತ ಕಾಂಗ್ರೆಸ್ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ತುಮಕೂರಿನಲ್ಲಿ ಸಾಧನಾ ಸಮಾವೇಶ

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version