Updated By: Priyalachhi

ಧಾರವಾಡ: ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದರು.

ದೇಶದ ಜನಸಂಖ್ಯೆ ಹೆಚ್ಚಾಗಿದೆ ‘ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ. ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.

‘ನಾವೆಲ್ಲರೂ ಮನುಷ್ಯರು, ಮನುಷ್ಯರಾಗಿ ಬದುಕಬೇಕು. ಈ ಹಿನ್ನೆಲೆಯಲ್ಲಿ ಅಂತರ ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗಬೇಕು. ಆದರೆ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಸಾಮೂಹಿಕ ಮದುವೆಯಲ್ಲಿ ಭಾಗಿಯಾದವರೆಲ್ಲರಿಗೂ ಒಂದು ಅಥವಾ ಎರಡು ಮಕ್ಕಳನ್ನ ಮಾತ್ರ ಮಾಡಿಕೊಳ್ಳಬೇಕು ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version