BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ದಕ್ಷಿಣದ ಜನರ ವಿಶ್ವಾಸ ಗಳಿಸುವಲ್ಲಿ ವಿಫಲವಾಗಿರುವ ಮೋದಿ ಸರ್ಕಾರ

Author Picture
Published On: April 6, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಪ್ರಸ್ತಾವಿತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ (Delimitation) ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಮೌನ ಮುರಿದಿರುವುದನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೇ ವೇಳೆ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ದಕ್ಷಿಣದ ರಾಜ್ಯಗಳಿಗೆ ‘ಭರವಸೆ’ ನೀಡುವ ಪ್ರಧಾನಿಯವರ ಈ ಹಠಾತ್ ಕಾಳಜಿಯು ರಾಜಕೀಯ ಮುತ್ಸದ್ದಿತನಕ್ಕಿಂತ ಹೆಚ್ಚಾಗಿ, ಮುಂಬರುವ ಕೇರಳ ಮತ್ತು ತಮಿಳುನಾಡು ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಣೆದ ಚುನಾವಣಾ ತಂತ್ರದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಟೀಕಿಸಿದ್ದಾರೆ.

ಲಾಭ ಯಾರಿಗೆ? ದಕ್ಷಿಣಕ್ಕೆ ಹೇಗೆ ನಷ್ಟ?
ಸಮಸ್ಯೆ ಇರುವುದು ದಕ್ಷಿಣದ ರಾಜ್ಯಗಳ ಲೋಕಸಭಾ ಸೀಟುಗಳು ಹೆಚ್ಚಾಗುತ್ತವೆಯೇ ಎಂಬುದರಲ್ಲಲ್ಲ. ಬದಲಾಗಿ, ಸೀಟುಗಳು ಹೇಗೆ ಹೆಚ್ಚಾಗುತ್ತವೆ ಮತ್ತು ಇದರಿಂದ ಅಸಮಾನವಾಗಿ ಯಾರಿಗೆ ಲಾಭವಾಗುತ್ತದೆ ಎಂಬುದರಲ್ಲಿದೆ. ಪ್ರಸ್ತಾವಿತ ವಿಸ್ತರಣೆಯಡಿ, ಪ್ರತಿಯೊಂದು ರಾಜ್ಯದಲ್ಲೂ ಸೀಟುಗಳು ಹೆಚ್ಚಾದರೂ, ಅದರ ದರ ಮತ್ತು ಪ್ರಮಾಣ ಸ್ಪಷ್ಟವಾಗಿ ಬಿಜೆಪಿ ಪ್ರಾಬಲ್ಯವಿರುವ ಉತ್ತರದ ರಾಜ್ಯಗಳಿಗೆ ಅತಿ ಹೆಚ್ಚು ಲಾಭ ತಂದುಕೊಡಲಿದೆ ಎಂದು ಸಿಎಂ ಹೇಳದಿ್ದಾರೆ.
ಉತ್ತರ ಪ್ರದೇಶದ ಸೀಟುಗಳು 80 ರಿಂದ 120ಕ್ಕೆ (+40), ಮಹಾರಾಷ್ಟ್ರ 48 ರಿಂದ 72ಕ್ಕೆ (+24), ಬಿಹಾರ 40 ರಿಂದ 60ಕ್ಕೆ (+20), ಮಧ್ಯಪ್ರದೇಶ 29 ರಿಂದ 43-44ಕ್ಕೆ (+14-15), ರಾಜಸ್ಥಾನ 25 ರಿಂದ 37-38ಕ್ಕೆ (+12-13) ಮತ್ತು ಗುಜರಾತ್ 26 ರಿಂದ 39ಕ್ಕೆ (+13) ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಸಿಎಂ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.
ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣದ ರಾಜ್ಯಗಳಿಗೆ ಅಲ್ಪ ಪ್ರಮಾಣದ ಏರಿಕೆ ಮಾತ್ರ ಸಿಗಲಿದೆ. ಕರ್ನಾಟಕದ ಸೀಟುಗಳು 28 ರಿಂದ 42ಕ್ಕೆ (+14), ತಮಿಳುನಾಡು 39 ರಿಂದ 58-59ಕ್ಕೆ (+20), ಆಂಧ್ರಪ್ರದೇಶ 25 ರಿಂದ 37-38ಕ್ಕೆ (+12-13), ತೆಲಂಗಾಣ 17 ರಿಂದ 25-26ಕ್ಕೆ (+8-9) ಮತ್ತು ಕೇರಳ 20 ರಿಂದ 30ಕ್ಕೆ (+10) ಏರಿಕೆಯಾಗಲಿವೆ. ಐದು ದಕ್ಷಿಣದ ರಾಜ್ಯಗಳು ಒಟ್ಟಾಗಿ ಕೇವಲ 63-66 ಹೆಚ್ಚುವರಿ ಸೀಟುಗಳನ್ನು ಪಡೆದರೆ, ಕೇವಲ ಏಳು ಉತ್ತರದ/ಹಿಂದಿ-ಭಾಷಿಕ ರಾಜ್ಯಗಳು 128-131 ಸೀಟುಗಳನ್ನು ಪಡೆಯುತ್ತವೆ. ಇದು ದಕ್ಷಿಣಕ್ಕಿಂತ ದುಪ್ಪಟ್ಟು ಎಂದು ಸಿಎಂ ತಮ್ಮ ಪೋಸ್ಟ್​ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಜನಸಂಖ್ಯೆ ನಿಯಂತ್ರಿಸಿದವರಿಗೆ ಶಿಕ್ಷೆ
ಲೋಕಸಭೆಯನ್ನು 816 ಸೀಟುಗಳಿಗೆ ವಿಸ್ತರಿಸಿದರೂ, ದಕ್ಷಿಣದ ರಾಜ್ಯಗಳ ಒಟ್ಟು ಪಾಲು ಶೇ. 24ರಷ್ಟೇ ಉಳಿಯಲಿದ್ದು, ಯಾವುದೇ ಬದಲಾವಣೆಯಾಗುವುದಿಲ್ಲ. ಜನಸಂಖ್ಯೆ ನಿಯಂತ್ರಣ ಮತ್ತು ಉತ್ತಮ ಆಡಳಿತ ನೀಡಿದ ರಾಜ್ಯಗಳಿಗೆ ಇದರ ಮೂಲಕ ಶಿಕ್ಷೆ ನೀಡಿದಂತಾಗುತ್ತದೆ. ರಾಷ್ಟ್ರದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡುತ್ತಿರುವ ಕರ್ನಾಟಕವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವ ಅಪಾಯವಿದೆ. ಪ್ರಸ್ತುತ ಉತ್ತರ ಪ್ರದೇಶ ಮತ್ತು ಕರ್ನಾಟಕದ ನಡುವಿನ ಸೀಟುಗಳ ಅಂತರ 52 ಇದ್ದರೆ, ಮುಂದೆ ಇದು 78ಕ್ಕೆ ಏರಲಿದೆ. ಮಹಾರಾಷ್ಟ್ರದೊಂದಿಗಿನ ಅಂತರ 20 ರಿಂದ 30ಕ್ಕೆ ವಿಸ್ತರಣೆಯಾಗಲಿದೆ. ಇದು ಕೇವಲ ವಿಸ್ತರಣೆಯಲ್ಲ, ಅಧಿಕಾರದ ಕೇಂದ್ರೀಕರಣವಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp