BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ: ರಾಜ್ಯ ರಾಜಕೀಯ ಬಗ್ಗೆ ಚರ್ಚಿಸದ ವರಿಷ್ಠರು!

Author Picture
Published On: December 1, 2025

—Advertisement—

Updated By: Priyalachhi

ಬೆಂಗಳೂರು: ರಾಜ್ಯದ ಪವರ್ ಫೈಟ್ ಸಂಬಂಧ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆಯುವ ಹೈ ಕಮಾಂಡ್ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಸಭೆಯಲ್ಲಿ ರಾಜ್ಯ ರಾಜಕೀಯ ಚರ್ಚೆ ಬಗ್ಗೆ ನಿರೀಕ್ಷಿತ ಚರ್ಚೆ ಆಗಿಲ್ಲ. ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಮೂಲಕ ಹೈ ಕಮಾಂಡ್ ರಾಜ್ಯ ಪವರ್ ಫೈಟ್​​ಗೆ ತಾತ್ಕಾಲಿಕ ವಿರಾಮ ನೀಡಿದ್ದು, ರಾಜ್ಯ ರಾಜಕಾರಣದ ಬಗ್ಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಸೋನಿಯಾ ಗಾಂಧಿ ಅವರ ದೆಹಲಿ ನಿವಾಸದಲ್ಲಿ ಭಾನುವಾರ ಸಂಜೆ ಮಹತ್ವದ ಸಭೆ ನಡೆಯಿತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡಿದ್ದ ಈ ಸಭೆಯಲ್ಲಿ ಪ್ರಮುಖವಾಗಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಲೋಕಸಭೆ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿ ಹಾಕುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತ ಚರ್ಚೆಗೆ ಮಾತ್ರ ಸೀಮಿತವಾಗಿದೆ.

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿನ ಪವರ್ ಫೈಟ್ ಬಗ್ಗೆ ಹೈ ಕಮಾಂಡ್ ಚರ್ಚೆ ನಡೆಸಿಲ್ಲ ಎಂದು ಹೇಳಲಾಗಿದೆ. ಸಭೆಯಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಯಾವುದೇ ಮಹತ್ತರ ಚರ್ಚೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಈಗಾಗಲೇ ಹೈ ಕಮಾಂಡ್ ರಾಜ್ಯ ಪವರ್ ಫೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿ ಪವರ್ ಫೈಟ್ ಕಿಚ್ಚಿಗೆ ಸದ್ಯಕ್ಕೆ ಬ್ರೇಕ್ ಹಾಕಿದೆ. ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಒಗ್ಗಟ್ಟಿನ ಪ್ರದರ್ಶನ ಮಾಡಿದರು. ಯಾವುದೇ ಗೊಂದಲ ಉಂಟಾಗದಂತೆ ನಡೆದುಕೊಳ್ಳಲು ಪರಸ್ಪರ ಒಪ್ಪಿಕೊಂಡಿದ್ದಾರೆ. ಹಾಗಾಗಿ ಬೆಳಗಾವಿ ಅಧಿವೇಶನದವರೆಗೂ ರಾಜ್ಯದ ಪವರ್ ಫೈಟ್​ಗೆ ಹೈ ಕಮಾಂಡ್ ತಾತ್ಕಾಲಿಕ ಅಲ್ಪ ವಿರಾಮ ಹಾಕಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp