Updated By: Priyalachhi 

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಸರಿಯಲ್ಲ.ದೇವರಾಜ ಅರಸು ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಆಡಳಿತ ವೈಖರಿ ಬೇರೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ಸಮಯದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದನ್ನು ಜನರು ಮೆಚ್ಚುವುದಿಲ್ಲ ಎಂದರು.

ಸಿಎಂ ಕುರ್ಚಿಗಾಗಿ ಆಂತರಿಕ ಕಚ್ಚಾಟ ಕಾಂಗ್ರೆಸ್ ನಲ್ಲಿ ಮುಂದುವರಿಯುತ್ತಲೇ ಇದೆ, ಸರ್ಕಾರದಲ್ಲಿ ಆಡಳಿತ ವೈಖರಿ ಸರಿಯಾಗಿಲ್ಲ, ಸಿದ್ದರಾಮಯ್ಯನವರದ್ದು ಸಾಧನೆ, ದಾಖಲೆ ಎಂದು ಹೇಳಲು ಏನೂ ಇಲ್ಲ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version