Updated By: Priyalachhi 

ಬೆಂಗಳೂರು: ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣ ಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ನನಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯನವರ ಪರ್ಯಾಯ ವ್ಯವಸ್ಥೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದು ನಾನು ಹೇಳುವುದಿಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ಕಂದಾಯ ಸಚಿವರು ವಿಶ್ಲೇಷಿಸಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಡಿಕೆಶಿಯವರು ಪಕ್ಷ ಸಂಘಟನೆಯಲ್ಲಿ ಮುಂದಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ರಾಜಕಾರಣದಲ್ಲಿ ಇಂತಹ ಕಾಂಬಿನೇಷನ್‌ ತುಂಬಾ ಅಪರೂಪ ಎಂದು ಸಿಎಂ, ಡಿಸಿಎಂ ಬಗ್ಗೆ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version