ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು.

ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ಜಮೀರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ ಎಂದು ಮಾಹಿತಿ ನೀಡಿದರು.

ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕಲ್ಲವೇ. ಯಾರಿಗೆ ಏನು ಹೇಳಬೇಕು, ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು ಮಾಡುತ್ತೇವೆ. ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ” ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version