Updated By: Priyalachhi

ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ತಪ್ಪಲ್ಲ. ಮಾಡೇ ಮಾಡ್ತಿವಿ ಎಂದರು.

ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ಜನರು ನೀವೇ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಹೇಳಿಕೆಯನ್ನು ಉಲ್ಲೇಖಿಸಿ ಅಚ್ಚರಿ ಮೂಡಿಸಿದರು.

ಸಂವಿಧಾನ ಜಾರಿಗೆ ಬಂದು 75 ವರ್ಷ ಕಳೆದರೂ ಸಮಾಜದಲ್ಲಿ ಸಮಾನತೆ ಬಂದಿಲ್ಲ. ಶ್ರೀಮಂತರು ಶ್ರೀಮಂತರಾಗಿಯೇ ಇದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡಿರುವ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆ ತೊಡದು ಹಾಕುವ ಪ್ರಯತ್ನ ಮಾಡುತ್ತಿದೆ ಎಂದರು.

ಸಮಾನತೆ, ಭ್ರಾತೃತ್ವ, ಸಮಸಮಾಜ ನಿರ್ಮಾಣ ಮಾಡಬೇಕು. ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಕೊಡಬೇಕು ಎಂದು ಅವರು ಹೇಳಿದ್ದರು. ಸಮಾನ ಅವಕಾಶ ಇಲ್ಲದಿದ್ದರೆ, ದೇಶಕ್ಕೆ ಸ್ವಾತಂತ್ರ್ಯ ಬಂದರೂ ಸಾರ್ಥಕವಾಗಲ್ಲ. ಕೇವಲ ರಾಜಕೀಯ ಸ್ವಾತಂತ್ರ್ಯ ಬಂದಲೆ ಸಾಲದು ಎಂದು ಸಿಎಂ ಪ್ರತಿಪಾದಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version