Updated By: Priyalachhi
ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ, ಸರ್ಕಾರಿ ಕಚೇರಿಗಳಲ್ಲಿ ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಮುಂದಿನ ಪೀಳಿಗೆಗೆ ಕೂಡ ಉಳಿಸಿ ಬೆಳೆಸಿಕೊಂಡು ಹೋಗಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇವತ್ತು ಪ್ರತಿ ಹಂತದಲ್ಲಿ ಸಂವಿಧಾನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದಿಂದ ಗ್ರಾಮೀಣ ಬಡವರ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿರುವುದು ನಮಗೆಲ್ಲಾ ಅಚ್ಚರಿ ತಂದಿದೆ.
ಇದರ ವಿರುದ್ಧ ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿದೆ. ನಾಳೆ ಬೆಳಗ್ಗೆ ರಾಜಭವನಕ್ಕೆ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ಪ್ರತಿ ತಾಲ್ಲೂಕಿನಲ್ಲಿ 5 ಕಿಲೋ ಮೀಟರ್ ಉದ್ದ ಪಾದಯಾತ್ರೆ ಹಮ್ಮಿಕೊಂಡು ಪ್ರತಿ ಪಂಚಾಯತಿಯಲ್ಲಿ ಹೋರಾಟ ಮಾಡುತ್ತೇವೆ, ಇದಕ್ಕೆ ಪ್ರಜಾ ಪ್ರತಿನಿಧಿಗಳಿಗೆ, ಪಂಚಾಯತ್ ಸದಸ್ಯರಿಗೆ ಮತ್ತು ಮುಖಂಡರುಗಳಿಗೆ ನಿರ್ದೇಶನ ನೀಡಿದ್ದೇವೆ ಎಂದರು.
