Updated By: Priyalachhi

ಕಲಬುರಗಿ: ಕಾಂಗ್ರೆಸ್ ನಾಯಕರ ಮೇಲೆ ಕೇಳಿಬರುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಜೆಪಿಯ ಬೆದರಿಕೆ ತಂತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಹಣಕಾಸಿನ ಮೂಲದ ಬಗ್ಗೆ ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆರೋಪಿಸಿದ್ದಾರೆ.

ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ ಇದು, ಇದೆಲ್ಲಾ ಬಿಜೆಪಿಯವರ ಹೆದರಿಸುವ ಬೆದರಿಸುವ ತಂತ್ರಗಾರಿಕೆ ಅಷ್ಟೇ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ ವಿಚಾರದ ಬಗ್ಗೆ ಮಾತನಾಡಿದ ಸಚಿವ ಖರ್ಗೆ, ಈ ಪ್ರಕರಣ ‘ವಿಶ್ವದಲ್ಲೇ ವಿಶಿಷ್ಟ ಪ್ರಕರಣ’ ಎಂದು ವ್ಯಂಗ್ಯವಾಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version