BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ನ್ಯೂಜಿಲೆಂಡ್​ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ

Author Picture
Published On: January 18, 2026

—Advertisement—

Updated By: Priyalachhi

ನ್ಯೂಜಿಲೆಂಡ್​ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಟೀಮ್ ಇಂಡಿಯಾ ನಾಯಕ ಶುಭ್​ಮನ್​ ಗಿಲ್​ ಅವರು ಟಾಸ್​ ಗೆದ್ದು ಮೊದಲು ಬೌಲಿಂಗ್​ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಮ್​ ಇಂಡಿಯಾ ತನ್ನ ಪ್ಲೇಯಿಂಗ್​ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿದೆ. ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಬದಲಿಗೆ ಅರ್ಶ್ದೀಪ್ ಸಿಂಗ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಟೀಮ್​ ಇಂಡಿಯಾ ನಾಯಕ ಗಿಲ್ ಇಂದಿನ ಪಂದ್ಯ ಗೆದ್ದು ಚೊಚ್ಚಲ ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್, ಭಾರತದಲ್ಲಿ ತಮ್ಮ ಮೊದಲ ಏಕದಿನ ಸರಣಿ ಗೆಲ್ಲುವ ಸುವರ್ಣಾವಕಾಶ ಹೊಂದಿದೆ. ನ್ಯೂಜಿಲೆಂಡ್ ಇಲ್ಲಿಯವರೆಗೆ ಭಾರತದಲ್ಲಿ ಏಳು ಏಕದಿನ ಸರಣಿಗಳನ್ನು ಆಡಿದ್ದು, ಏಳನ್ನೂ ಸೋತಿದೆ.

ಪ್ರಸ್ತುತ ಸರಣಿ ಬಗ್ಗೆ ನೋಡುವುದಾದರೆ, ವಡೋದರಾದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 300 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ 4 ವಿಕೆಟ್‌ಗಳಿಂದ ಗೆದ್ದಿತ್ತು. ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಅದ್ಭುತ ಪುನರಾಗಮನ ಮಾಡಿ 284 ರನ್‌ಗಳನ್ನು ಬೆನ್ನಟ್ಟಿ 7 ವಿಕೆಟ್‌ಗಳಿಂದ ವಿಜಯ ಪತಾಕೆ ಹಾರಿಸಿತ್ತು. ಇದರ ಪರಿಣಾಮವಾಗಿ ಸರಣಿ 1-1 ಸಮಬಲಗೊಂಡಿತ್ತು.

ಮುಖಾಮುಖಿ ದಾಖಲೆ: ಭಾರತ ಮತ್ತು ನ್ಯೂಜಿಲೆಂಡ್ ಇದುವರೆಗೆ 122 ಏಕದಿನ ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ 63 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 51 ಪಂದ್ಯಗಳನ್ನು ಗೆದ್ದುಕೊಂಡಿದೆ. ಏಳು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡರೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹಿಂದಿನ ಐದು ಪಂದ್ಯಗಳ ದಾಖಲೆ ನೋಡಿದರೇ ಇದರಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ನಾಲ್ಕರಲ್ಲಿ ಗೆಲುವು ಸಾಧಿಸಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp