BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲು ನಿರ್ಧಾರ, ಸರ್ವಪಕ್ಷ ಸಭೆ ಮುಂದೂಡಿಕೆ; ಡಿಕೆಶಿ

Author Picture
Published On: December 4, 2025

—Advertisement—

Updated By: Priyalachhi

ಬೆಂಗಳೂರು: ಡಿ.14ರಂದು ದೆಹಲಿ ರಾಮಲೀಲಾ ಮೈದಾನದಲ್ಲಿ ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ದೆಹಲಿಗೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿಭಟನೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಅದಕ್ಕಾಗಿ ಸಚಿವರಿಗೆ ಹಾಗೂ ಶಾಸಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಮಾವೇಶಕ್ಕೆ ತೆರಳಲಿರುವ ನಮ್ಮ ಕಾರ್ಯ ಕರ್ತರಿಗೆ ವಾಸ್ತವ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಆ ದೃಷ್ಟಿಯಿಂದ ದೆಹಲಿಗೆ ಹೋಗುತ್ತಿದ್ದು, ಗುರುವಾರದ ಸಚಿವ ಸಂಪುಟ ಸಭೆಗಾಗಿ ವಾಪಸ್ ಬರುತ್ತೇನೆ ಎಂದು ತಿಳಿಸಿದರು.

ಮತಗಳ್ಳತನ ಹೋರಾಟ ಕರ್ನಾಟಕದಿಂದಲೇ ಆರಂಭವಾಗಿದ್ದು, ಅದಕ್ಕಾಗಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರತಿ ಜಿಲ್ಲೆಯಿಂದ 300 ಜನರು, ಪ್ರತಿ ತಾಲೂಕಿನಿಂದ ಕನಿಷ್ಠ 30 ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಅದಕ್ಕಾಗಿ ವಿಶೇಷ ರೈಲಿಗಾಗಿ ರೈಲ್ವೆ ಸಚಿವರಲ್ಲಿ ಮನವಿ ಮಾಡಿದ್ದೇನೆ. ಎಲ್ಲ ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಇದರ ಜವಾಬ್ದಾರಿ ವಹಿಸಿಕೊಳ್ಳಬೇಕು.ಈ ಬಗ್ಗೆ ನಾನು ಮತ್ತು ಮುಖ್ಯ ಮಂತ್ರಿ ಅವರು ಎಲ್ಲರಿಗೂ ಸಂದೇಶ ರವಾನಿಸಿದ್ದೇವೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp