BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲು ನಿರ್ಧಾರ, ಸರ್ವಪಕ್ಷ ಸಭೆ ಮುಂದೂಡಿಕೆ; ಡಿಕೆಶಿ

Author Picture
Published On: December 4, 2025

—Advertisement—

Updated By: Priyalachhi

ಬೆಂಗಳೂರು: ಡಿ.14ರಂದು ದೆಹಲಿ ರಾಮಲೀಲಾ ಮೈದಾನದಲ್ಲಿ ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ದೆಹಲಿಗೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿಭಟನೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಅದಕ್ಕಾಗಿ ಸಚಿವರಿಗೆ ಹಾಗೂ ಶಾಸಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಮಾವೇಶಕ್ಕೆ ತೆರಳಲಿರುವ ನಮ್ಮ ಕಾರ್ಯ ಕರ್ತರಿಗೆ ವಾಸ್ತವ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಆ ದೃಷ್ಟಿಯಿಂದ ದೆಹಲಿಗೆ ಹೋಗುತ್ತಿದ್ದು, ಗುರುವಾರದ ಸಚಿವ ಸಂಪುಟ ಸಭೆಗಾಗಿ ವಾಪಸ್ ಬರುತ್ತೇನೆ ಎಂದು ತಿಳಿಸಿದರು.

ಮತಗಳ್ಳತನ ಹೋರಾಟ ಕರ್ನಾಟಕದಿಂದಲೇ ಆರಂಭವಾಗಿದ್ದು, ಅದಕ್ಕಾಗಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರತಿ ಜಿಲ್ಲೆಯಿಂದ 300 ಜನರು, ಪ್ರತಿ ತಾಲೂಕಿನಿಂದ ಕನಿಷ್ಠ 30 ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಅದಕ್ಕಾಗಿ ವಿಶೇಷ ರೈಲಿಗಾಗಿ ರೈಲ್ವೆ ಸಚಿವರಲ್ಲಿ ಮನವಿ ಮಾಡಿದ್ದೇನೆ. ಎಲ್ಲ ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಇದರ ಜವಾಬ್ದಾರಿ ವಹಿಸಿಕೊಳ್ಳಬೇಕು.ಈ ಬಗ್ಗೆ ನಾನು ಮತ್ತು ಮುಖ್ಯ ಮಂತ್ರಿ ಅವರು ಎಲ್ಲರಿಗೂ ಸಂದೇಶ ರವಾನಿಸಿದ್ದೇವೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp