BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ

Author Picture
Published On: April 5, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದೆ.

 

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp