Updated By: Priyalachhi

ಬೆಂಗಳೂರು: ರಾಜಧಾನಿ ಬೆಂಗಳೂರು ಹಲವು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ ಪ್ರವಾಸಿ ತಾಣವಾಗಿ ಪ್ರಚಾರ ಮಾಡಲಿಲ್ಲ. ಈಗ ಹೊಸದಾಗಿ ಪ್ರಾರಂಭಿಸಲಾದ ಅಂಬಾರಿ ಡಬಲ್ ಡೆಕ್ಕರ್ ಪ್ರವಾಸಿ ಬಸ್ ಮೂಲಕ, ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ಇಂದು ರವೀಂದ್ರ ಕಲಾತಕ್ಷೇತ್ರದ ಎದುರು ಬೆಂಗಳೂರಿನ ಪ್ರವಾಸಿಗರಿಗಾಗಿ ಲಂಡನ್‌ ಮಾದರಿಯ ‘ಅಂಬಾರಿ ಡಬಲ್‌ ಡೆಕ್ಕರ್‌’ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಬೆಂಗಳೂರು ನಗರದಲ್ಲಿ ಲಂಡನ್ ಮಾದರಿಯ ಮೂರು ‘ಅಂಬಾರಿ ಡಬಲ್ ಡೆಕ್ಕರ್’ ಬಸ್ ಗಳ ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ವಿಧಾನಸೌಧವು ವಿಶ್ವದಲ್ಲಿ ವಾಸ್ತುಶಿಲ್ಪದ ವಿಶಿಷ್ಟವಾಗಿದೆ. ಆದರೆ ಇಲ್ಲಿಯವರೆಗೆ ಇದನ್ನು ಸರ್ಕಾರಿ ಕಟ್ಟಡವಾಗಿ ಮಾತ್ರ ನೋಡಲಾಗಿದೆ. ಈ ಬಸ್ ಸೇವೆಯ ಮೂಲಕ, ವಿಧಾನಸೌಧಕ್ಕೆ ಪ್ರವಾಸೋದ್ಯಮ ಅವಕಾಶವೂ ಹೆಚ್ಚಾಗುತ್ತದೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version