• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ; ಹೈಕೋರ್ಟ್ ವಕೀಲ ಸಾವು

Sambrama Prabha News by Sambrama Prabha News
December 18, 2025
in Latest News
0
ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ; ಹೈಕೋರ್ಟ್ ವಕೀಲ ಸಾವು

Updated By: Priyalachhi

ಬೆಂಗಳೂರು: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹೈಕೋರ್ಟ್ ವಕೀಲರೊಬ್ಬರು ಸಾವಿಗೀಡಾಗಿದ್ದಾರೆ. ನಂತರ ಆ ಕಾರು ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಎನ್. ರಾಮಚಂದ್ರ ರೆಡ್ಡಿ (61) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಭರತ್ (19) ಮತ್ತು ಹಿಂಬದಿ ಕುಳಿತಿದ್ದ ಸ್ವಾತಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 17 ರಂದು ಸಂಜೆ 7.28ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂಜಯ್‌ನಗರ ಪ್ರದೇಶದ ಡಾಲರ್ಸ್ ಕಾಲೋನಿಯ ಆರ್‌ಎಂವಿ ಕ್ಲಬ್ ಬಳಿ ರೆಡ್ಡಿ ರಸ್ತೆ ದಾಟುತ್ತಿದ್ದಾಗ, ಅತಿವೇಗದಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ನಂತರ ಅದೇ ಕಾರು ಮುಂದಿನ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಲ್ಲಿಸಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಭಾಗಿಯಾದ ಎಲ್ಲ ವಾಹನಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಡ್ಡಿಯನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Tags: ವಕೀಲ ಸಾವುಹೈಕೋರ್ಟ್
Previous Post

ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ

Next Post

ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

Next Post
ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.