BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು

Author Picture
Published On: December 9, 2025

—Advertisement—

Updated By: Priyalachhi

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಮಂಗಳವಾರ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೊದಲು 20,000 ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ನಿನ್ನೆ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸ್ಥಳವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪಕ್ಷದ ಶಾಸಕ ಅಭಯ್ ಪಾಟೀಲ್ ಮತ್ತು ಎಂಎಲ್‌ಸಿ ಸಿ.ಟಿ. ರವಿ ಅವರೊಂದಿಗೆ ವಿಜಯೇಂದ್ರ ಪರಿಶೀಲಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

“ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷಿಸಿದ್ದಕ್ಕಾಗಿ ನಮ್ಮ ಪ್ರತಿಭಟನೆ ಇದಾಗಿರುತ್ತದೆ. ಕಬ್ಬು, ಜೋಳ, ಭತ್ತ, ತೊಗರಿ ಬೆಳೆಗಾರರು ಮತ್ತು ಇತರ ರೈತರಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು, ಆದರೆ ರೈತರ ಸಮಸ್ಯೆಗಳನ್ನು ನಿವಾರಿಸಲು ಏನನ್ನೂ ಮಾಡಲಿಲ್ಲ.

ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಅಭ್ಯಾಸ ಮಾಡಿಕೊಂಡಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ 20,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.

ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಮಾಹಿತಿ ನೀಡಿ, ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿಯಾಗಿದೆ. ಕಾಂಗ್ರೆಸ್‌​ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp