• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಳಗಾವಿ ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರು: ಈಗ ಸಿಎಂ ಸಿದ್ದರಾಮಯ್ಯ ಹೇಗಿದ್ದಾರೆ?

Sambrama Prabha News by Sambrama Prabha News
December 18, 2025
in Politics
0
ಬೆಳಗಾವಿ ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರು: ಈಗ ಸಿಎಂ ಸಿದ್ದರಾಮಯ್ಯ ಹೇಗಿದ್ದಾರೆ?

Updated By: Priyalachhi

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ನಿನ್ನೆ ಕಾಂಗ್ರೆಸ್ ಏರ್ಪಡಿಸಿದ್ದ ಕೇಂದ್ರಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡು ನಂತರ ಸರ್ಕ್ಯೂಟ್ ಹೌಸ್‌ಗೆ ತೆರಳಿದರು.

ಮಧ್ಯಾಹ್ನದಿಂದ ಕೊಠಡಿ ಬಿಟ್ಟು ಹೊರ ಬರದಿದ್ದಾಗ ಗೊತ್ತಾಗಿದ್ದು ಅವರಿಗೆ ಅನಾರೋಗ್ಯ ಎಂಬ ವಿಚಾರ. ಮೊನ್ನೆ ಮಂಗಳವಾರ ರಾತ್ರಿ ಊಟ ಮಾಡಿದ ನಂತರ ಫುಡ್‌ಪಾಯಿಸನ್ ಆಗಿ ಹೊಟ್ಟೆ ನೋವು ಕೂಡ ಆರಂಭವಾಗಿತ್ತಂತೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಕೂಡ ಆಗಿರಲಿಲ್ಲ. ಬೆಳಗ್ಗೆಯಾದರೂ ಆರೋಗ್ಯ ಸರಿಯಾಗಿರಲಿಲ್ಲ. ಅದೇ ಸ್ಥಿತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಿಸಿಲಿನಲ್ಲಿ ಕುಳಿತರು. ಇದಾದ ಸ್ವಲ್ಪ ಹೊತ್ತಿಗೆ ಸುಸ್ತಾಗಿ ಸಿಎಂ ನೇರವಾಗಿ ಸರ್ಕ್ಯೂಟ್ ಹೌಸ್‌ಗೆ ತೆರಳಿದರು‌.

Tags: ಸಿಎಂ ಸಿದ್ದರಾಮಯ್ಯ
Previous Post

ಗುರುವಾರದ ಪಂಚಾಂಗ, ಭವಿಷ್ಯ

Next Post

ಎಸ್​​ಸಿ ಉಪವರ್ಗೀಕರಣ ಮಸೂದೆ ಸೇರಿ 3 ಹೊಸ ವಿಧೇಯಕ ಮಂಡನೆ, 5 ಪ್ರಮುಖ ಮಸೂದೆಗಳ ಅಂಗೀಕಾರ

Next Post
ಎಸ್​​ಸಿ ಉಪವರ್ಗೀಕರಣ ಮಸೂದೆ ಸೇರಿ 3 ಹೊಸ ವಿಧೇಯಕ ಮಂಡನೆ, 5 ಪ್ರಮುಖ ಮಸೂದೆಗಳ ಅಂಗೀಕಾರ

ಎಸ್​​ಸಿ ಉಪವರ್ಗೀಕರಣ ಮಸೂದೆ ಸೇರಿ 3 ಹೊಸ ವಿಧೇಯಕ ಮಂಡನೆ, 5 ಪ್ರಮುಖ ಮಸೂದೆಗಳ ಅಂಗೀಕಾರ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.