Updated By: Priyalachhi

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಆಗ್ರಹಿಸಿದ್ದಾರೆ.

ಸದನದಲ್ಲಿ ಬೆಳೆ ವಿಮೆ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರ್ ಖಂಡ್ರೆಯವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಯೋಜನೆಯನ್ನು ಬಿಜೆಪಿ ಪ್ರಾಯೋಜಿತ ‘ಗೋಲ್ಮಾಲ್’ ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ ಎಂದು ಹೇಳಿದ್ದಾರೆ.

ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ತಿಳಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೆ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೆ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ. ರಾಜ್ಯದ ಜನರಿಗೆ ಸತ್ಯದ ಅರಿವಿದೆ. ಖೂಬಾಗೆ ಮಾಡಲು ಕೆಲಸವಿಲ್ಲ. ಈಗ ನಿರುದ್ಯೋಗಿಯಾಗಿದ್ದಾರೆ. ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version