BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಮದ್ಯ ಅಲ್ಲ, ಹಾಲು ಕುಡಿದು ಹೊಸ ವರ್ಷಾಚರಣೆ

Author Picture
Published On: January 1, 2026

—Advertisement—

Updated By: Priyalachhi 

ಜೈಪುರ(ರಾಜಸ್ಥಾನ): ಹೊಸ ವರ್ಷದ ಮುನ್ನಾದಿನವಾದ ನಿನ್ನೆ(ಬುಧವಾರ) ರಾಜಸ್ಥಾನದ ರಾಜಧಾನಿ ಜೈಪುರ ವಿಶೇಷ ಸಂದೇಶದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡಿತು. ನಗರದಾದ್ಯಂತ 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಸುಮಾರು ಒಂದು ಲಕ್ಷ ಲೀಟರ್ ಹಾಲು ವಿತರಿಸಲಾಯಿತು. ಹೊಸ ವರ್ಷವನ್ನು ಮದ್ಯದ ಬದಲು ಹಾಲಿನೊಂದಿಗೆ ಆಚರಿಸೋಣ ಎಂಬುದೇ ಇಲ್ಲಿರುವ ಸಂದೇಶ.

ರಾಜಸ್ಥಾನ ಯುವ ವಿದ್ಯಾರ್ಥಿಗಳ ಸಂಘಟನೆ ಮತ್ತು ಭಾರತೀಯ ಅಸ್ತಮಾ ಆರೈಕೆ ಸಂಘವು ರಾಜಸ್ಥಾನ ವಿಶ್ವವಿದ್ಯಾಲಯದ ದ್ವಾರದಲ್ಲಿ ಹಾಲು ವಿತರಿಸಿತು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಸಾವಿರಾರು ಜನರು ಹಾಲು ಸ್ವೀಕರಿಸಿ ಸೇವಿಸಿದರು.

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಾಜೀವ್ ಪಚಾರ್ ಮೆಚ್ಚುಗೆ ವ್ಯಕ್ತಪಡಿಸಿ, “ರಾಜಸ್ಥಾನ ವಿವಿಯ ದ್ವಾರದಲ್ಲಿ ಹಾಲು ವಿತರಣಾ ಕಾರ್ಯಕ್ರಮ ಮಾಡಿರುವುದು ಅತ್ಯಂತ ಶ್ಲಾಘನೀಯ. ಇದು ಹೊಸ ವರ್ಷವನ್ನು ಮದ್ಯದ ಬದಲು ಹಾಲಿನೊಂದಿಗೆ ಪ್ರಾರಂಭಿಸಬೇಕೆಂಬ ಸಂದೇಶ ನೀಡುತ್ತದೆ. ಹೊಸ ವರ್ಷ ಎಲ್ಲರಿಗೂ ಶುಭವಾಗಬೇಕು. ಅದಕ್ಕಾಗಿ ಮೊದಲ ದಿನದಿಂದಲೇ ಒಳ್ಳೆಯ ಆರಂಭ ಅತ್ಯಗತ್ಯ. ಹೊಸ ವರ್ಷವನ್ನು ಶಾಂತಿಯುತವಾಗಿ ಆಚರಿಸೋಣ” ಎಂದು ಅವರು ಮನವಿ ಮಾಡಿದರು.

ವಿಶ್ವವಿದ್ಯಾಲಯದ ದ್ವಾರದಲ್ಲಿ ಹಾಲು ವಿತರಣಾ ಕಾರ್ಯಕ್ರಮವು 21 ವರ್ಷಗಳ ಹಿಂದೆ ಹೊಸ ವರ್ಷದ ಮುನ್ನಾದಿನದಂದು 500 ಲೀಟರ್ ಹಾಲು ವಿತರಿಸುವ ಮೂಲಕ ಶುರುವಾಗಿತ್ತು. ಇದು ಮುಂದಿನ ವರ್ಷಗಳಲ್ಲಿ ಬೆಳೆದು ಈಗ 8,000 ಲೀಟರ್ ಹಾಲು ವಿತರಣೆಯವರೆಗೆ ತಲುಪಿದೆ. ಇದೀಗ ಜೈಪುರ ನಗರದಾದ್ಯಂತ 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಾಲು ವಿತರಣಾ ಕಾರ್ಯಕ್ರಮಗಳು ನಡೆಯುತ್ತಿವೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp