Updated By: Priyalachhi

ಬೆಂಗಳೂರು: ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು.

“ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದರು.

ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version